ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಸುಗ್ರಿವಾಜ್ಞೆ ತರುವುದಕ್ಕೆ ವಿರೋಧ

ಕಲಬುರಗಿ: ರಾಜ್ಯ ಸರಕಾರವು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಸುಗ್ರಿವಾಜ್ಞೆ ಹೊರಡಿಸುವುದರಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ವ್ಯವಹರಿಸುವ ರೈತರಿಗೆ ವ್ಯಾಪಾರಸ್ಥರಿಗೆ ತುಂಬಾ ಸಂಕಷ್ಟದಲ್ಲಿ ಸಿಲುಕಿದಂತಾಗಿದೆ ಆದ್ದರಿಂದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಸುಗ್ರಿವಾಜ್ಞೆ ತುರುವುದಕ್ಕೆ ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘ ಕಲಬುರಗಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸುತ್ತದೆ ಎಂದು ಸಂಘದ ಅಧ್ಯಕ್ಷ ಶಿವಕುಮಾರ ಘಂಟಿ ಅವರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ವರ್ತಕರು ಶೇ.1.5 ರಷ್ಟು ಮಾರುಕಟ್ಟೆ ಶುಲ್ಕವನ್ನು ಭರಿಸಿ ವ್ಯಾಪಾರ ಮಾಡುತ್ತಿದ್ದಾರೆ. ರಾಜ್ಯ ಸರಕಾರವು ಎಪಿಎಂಸಿ ಕಾಯ್ದೆ ತಿದ್ದುಪಡಿ ತರುವುದರಿಂದ ಪ್ರಾಂಗಣದಲ್ಲಿ ವ್ಯಾಪಾರ ಮಾಡುವ ವರ್ತಕರಿಗೆ, ಮುನಿಮರಿಗೆ, ಹಮಾಲರಿಗೆ ಹಾಗೂ ಇದರ ಹಿಂದೆ ದುಡಿಯುವ ಸಾವಿರಾರು ಕಾರ್ಮಿಕರು ಈ ಹೊಸ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವುದರಿಂದ ಉಪ ಜೀವನಕ್ಕೆ ತೊಂದರೆಯಾಗುತ್ತದೆ ಅದಲ್ಲದೆ ಲಕ್ಷ ಗಟ್ಟಲೆ ದುಡಿಯುವ ವರ್ಗಕ್ಕೆ ಹಾನಿ ಉಂಟಾಗುತ್ತದೆ ಆದ್ದರಿಂದ ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಸುಗ್ರಿವಾಜ್ಞೆ ತರುವುದಕ್ಕೆ ಕಲಬುರಗಿ ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘ (ರಿ) ವಿರೋಧವನ್ನು ವ್ಯಕ್ತಪಡಿಸುತ್ತದೆ ಎಂದರು.

ರೈತರ ಹಾಗೂ ವ್ಯಾಪಾರಸ್ತರ ಸಂಬಂಧ ಬಹಳ ಚೆನ್ನಾಗಿ ಇದೆ ಅದಲ್ಲದೇ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ವ್ಯಾಪಾರಸ್ಥರು ಶೇ.1.5 ರಷ್ಟು ಮಾರುಕಟ್ಟೆ ಶುಲ್ಕವನ್ನು ಭರಿಸಿ ವ್ಯಾಪಾರ ಮಾಡುತ್ತಾರೆ. ಆದ್ದರಿಂದ ಸರಕಾರಕ್ಕೆ ಕೋಟಿ ಗಟ್ಟಲೆ ಶುಲ್ಕ ಸರಕಾರ ಖಜಾನೆಗೆ ಸಂದಾಯವಾಗುತ್ತದೆ. ಈ ಕಾಯ್ದೆ ತರುವುದರಿಂದ ರೈತಾಪಿ, ವ್ಯಾಪಾರ ವರ್ಗಕ್ಕೆ ಸೂಕ್ತ ಬೆಲೆ ಸಿಗುವುದಿಲ್ಲ ಹಾಗೂ ಅನಾನುಕೂಲತೆ ಹೆಚ್ಚಾಗುತ್ತದೆ ರೈತರ ಹಾಗೂ ವ್ಯಾಪಾರಸ್ಥರಿಗೆ ಕೊಡಲಿ ಪೆಟ್ಟು ಬಿಳುವುದರಿಂದ ಈ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತೇವೆ ಹಾಗೂ ಪ್ರತಿಭಟಿಸಲಾಗುತ್ತದೆ ಎಂದರು.

ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸುಮಾರು 1000 ವರ್ತಕರು ಸಮಿತಿಯಿಂದ ಲೈಸನ್ಸ್ ಪಡೆದು ವ್ಯವಹರಿಸುತ್ತಿದ್ದಾರೆ. ಈ ಕಾನೂನು ಜಾರಿಯಾದರೆ ರೈತರ ಹಿತ ಬಲಿ ಕೊಟ್ಟಂತ್ತಾಗುತ್ತದೆ ಎಂದರು.

ದೇಶವು ಕೋವಿಡ್-19 ರೋಗಾಣುದಿಂದ ತತ್ತರಿಸಿ ಹೋಗಿರುವ ಸಂದರ್ಭದಲ್ಲಿ ರೈತರ ಬೆಳೆದ ದವಸ ಧಾನ್ಯಗಳನ್ನು ಮಾರಾಟವಾಗದೆ ಇರುವ ಸಂದರ್ಭದಲ್ಲಿ ರೈತರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಹಗಲು ರಾತ್ರಿ ಎನ್ನದೆ ರೈತರ ಶ್ರೇಯೋಭಿವೃದ್ದಿಗಾಗಿ ಕಾಂiÀರ್iನಿರ್ವಹಿಸುತ್ತಿದ್ದು ಹಾಗೂ ತೋಟಗಾರಿಕೆ ಬೆಳೆಗಳಿಂದ ರೈತರಿಗೆ ಸೂಕ್ತ ಮಾರಾಟ ವ್ಯವಸ್ಥೆ ಇರದೇ ಸಾಕಷ್ಟು ರೈತರು ಕಂಗಾಲಾಗಿ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ರೈತರ ಕೈ ಹಿಡಿದು ರೈತರು ಬೆಳೆದ ಹಣ್ಣು ಮತ್ತು ತರಕಾರಿಗಳಿಗೆ ಸೂಕ್ತ ಮಾರಾಟ ವ್ಯವಸ್ಥೆ ಕಲ್ಪಿಸಿ ಅವರ ಜೀವನಕ್ಕೆ ದಾರಿ ದೀಪವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಎಪಿಎಂಸಿಗಳಿಗೆ ತಿದ್ದುಪಡಿ ತರುವುದು ಸೂಕ್ತವಾಗಿರುವುದಿಲ್ಲ. ಆದ್ದರಿಂದ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರಿವಾಜ್ಞೆ ತರುವುದು ಸೂಕ್ತವಾಗಿರುವುದಿಲ್ಲ. ಇದನ್ನು ಸಂಘವು ತೀವೃವಾಗಿ ವಿರೋಧ ವ್ಯಕ್ತಪಡಿಸುತ್ತದೆ ಸದರಿ ಕಾಯ್ದೆ ತಂದಲ್ಲಿ ಮುಂಬರುವ ದಿನಗಳಲ್ಲಿ ರಾಜಾದ್ಯಂತ ಘೋರ ಹೋರಾಟ ಮಾಡಬೇಕಾಗುತ್ತದೆ. ಆದಕಾರಣ ಸದರಿ ಕಾಯ್ದೆ ಜಾರಿಗೆ ತರುವುದನ್ನು ಕೈ ಬಿಡಲು ಸಂಘವು ಮನವಿ ಮಾಡುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಉಪಾದ್ಯಕ್ಷ ಬಸವರಾಜ. ಎಸ್.ಕಣ್ಣಿ, ಕಾರ್ಯದರ್ಶಿ ಬಸವರಾಜ್ ಎಚ್.ತಡಕಲ್, ಸಹ ಕಾರ್ಯದರ್ಶಿ ರವಿಂದ್ರ ಎಸ್.ದೇವರಮನಿ, ಖಜಾಂಚಿ ಕಲ್ಯಾಣರಾವ ಎಸ್.ಮೂಲಗೆ, ಅಮರನಾಥ ಪಾಟೀಲ್ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420