35 ಸ್ಥಳಗಳಲ್ಲಿ 2,069 ಜನರಿಗೆ ಕ್ವಾರಂಟೈನ್ ವ್ಯವಸ್ಥೆ

ಚಿತ್ತಾಪುರ: ತಾಲೂಕಿಗೆ ಹೊರ ರಾಜ್ಯ ಮತ್ತು ಹೊರ ಜಿಲ್ಲೆಯಿಂದ ಬಂದ ಕೊರೊನ್ ವೈರಸ್ ಮುಂಜಾಗ್ರತ ಕ್ರಮವಾಗಿ ಜನರಿಗೆ ಕ್ವಾರಂಟೈನ್ ಗಾಗಿ ಚಿತ್ತಾಪುರ ಹೋಬಳಿಯಲ್ಲಿ 15 ಗುಂಡಗುರ್ತಿಯಲ್ಲಿ 6 ಮತ್ತು ನಾಲವಾರ ಹೋಬಳಿಯಲ್ಲಿ 14 ಸ್ಥಳಗಳನ್ನು ಸೇರಿದಂತೆ ಒಟ್ಟು 35 ಸ್ಥಳಗಳಲ್ಲಿ 2,069 ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದು ತಹಸಿಲ್ದಾರ್ ಉಮಾಕಾಂತ ಹಳ್ಳೆ ತಿಳಿಸಿದರು.

ಮೇ 6 ರಿಂದ 13 ರವರೆಗೆ 1,112 ಗಂಡು 957 ಹೆಣ್ಣು ಸೇರಿ ಒಟ್ಟು 2,069 ವಲಸೆ ಕಾರ್ಮಿಕರು ತಾಲೂಕಿಗೆ ಆಗಮಿಸಿದ್ದು.
ಚಿತ್ತಾಪುರ್ ಹೋಬಳಿ: ಮುರಾರ್ಜಿ ದೇಸಾಯಿ ವಸತಿ ನಿಲಯ, ಅಲ್ಪಸಂಖ್ಯಾತರ ವಸತಿ ನಿಲಯ ಹಿಂದುಳಿದ ವರ್ಗಗಳ ವಸತಿ ನಿಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಸವೇಶ್ವರ ಕಲ್ಯಾಣ ಮಂಟಪ, ಬಜಾಜ್ ಕಲ್ಯಾಣ್ ಮಂಟಪ, ಕಿಂಗ್ ಪ್ಯಾಲೇಸ್ ಫಂಕ್ಷನ್ ಹಾಲ್, ಎ-1 ಫಂಕ್ಷನ್ ಹಾಲ್, ವಸತಿ ನಿಲಯ ರಾವೂರ, ಗಂಗಾ ಪರಮೇಶ್ವರಿ ಮಹಾವಿದ್ಯಾಲಯ, ಡಿಎವಿ ಶಾಲೆ ಓರಿಯಂಟ್ ಸಿಮೆಂಟ್,ಸರ್ಕಾರಿ ಪ್ರೌಢಶಾಲೆ ಡಿಗ್ಗಾಂವ್, ಸರ್ಕಾರಿ ಪ್ರೌಢಶಾಲೆ ಸಾತನೂರ, ಆದರ್ಶ ವಿದ್ಯಾಲಯ ಕರದಾಳ, ಸರ್ಕಾರಿ ಪ್ರೌಢಶಾಲೆ ಕರದಾಳ,
ಗುಂಡಗುರ್ತಿ ಹೋಬಳಿ: ಮುರಾರ್ಜಿ ದೇಸಾಯಿ ವಸತಿ ನಿಲಯ ಗುಂಡುಗುರ್ತಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯ ಗುಂಡಗುರ್ತಿ, ಹಿಂದುಳಿದ ವರ್ಗಗಳ ವಸತಿ ನಿಲಯ ದಂಡೋತಿ, ಮುರಾರ್ಜಿ ದೇಸಾಯಿ ವಸತಿ ನಿಲಯ, ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಮಾಡಬೂಳ, ಸರ್ಕಾರಿ ಪ್ರೌಢಶಾಲೆ ಮುಗುಳನಾಗಾಂವ್,
ನಾಲವಾರ ಹೋಬಳಿ: ಏಕಲವ್ಯ ವಸತಿ ನಿಲಯ ಕೊಂಚೂರು, ಹಿಂದುಳಿದ ವರ್ಗಗಳ ವಸತಿ ನಿಲಯ ಕೊಲ್ಲೂರು, ಸರ್ಕಾರಿ ಪ್ರೌಢಶಾಲೆಯ ಕೊಲ್ಲೂರು, ಸರ್ಕಾರಿ ಪ್ರೌಢಶಾಲೆಯ ನಾಲವಾರ, ಸರ್ಕಾರಿ ಉರ್ದು ಪ್ರೌಢಶಾಲೆ ನಾಲವಾರ, ಪದವಿಪೂರ್ವ ಕಾಲೇಜು ಸೇರಿದಂತೆ ಇತರ ಕಡೆಗಳಲ್ಲಿ ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜು ಗಂಡು ಮಕ್ಕಳ ವಸತಿ ನಿಲಯಕ್ಕೆ ಭೇಟಿ ನೀಡಿದ ತಹಸಿಲ್ದಾರ್ ಉಮಾಕಾಂತ ಹಳ್ಳೆ ಹಾಗೂ ನೋಡಲ್ ಅಧಿಕಾರಿ ಸಿಡಿಪಿಓ ರಾಜಕುಮಾರ್ ರಾಠೋಡ್ ಮಾಹಿತಿ ನೀಡಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420