ಕಲಬುರಗಿ: ಮೂರು ಅವಧಿಗೆ ಎಂ.ಎಲ್.ಸಿ.ಯಾಗಿ, ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತದಲ್ಲಿರುವ ಭಾರತೀಯ ಜನತಾ ಪಕ್ಷದ ಸಹ ವಕ್ತಾರರಾಗಿ; ಅಷ್ಟೇ ಅಲ್ಲದೆ ಮುಂಬರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿಯಾಗಿರುವ ಶಶೀಲ್ ನಮೋಶಿ ಅವರು ತಮ್ಮ ಸ್ವಂತ ರಾಜಕೀಯ ಹಿತಾಸಕ್ತಿಯನ್ನು ಕಾಯ್ದುಕೊಳ್ಳಲು `ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಕಡಿತ ಮಾಡಬೇಡಿರಿ’ ಎಂದು ಪತ್ರ ಬರೆದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿರುವುದು ನಿಜಕ್ಕೂ ನಾಜಕೆಗೇಡಿನ ಸಂಗತಿ ಎಂದು ಭಾಜಪಾ ಸದಸ್ಯ ನಿವೃತ್ತ ಪ್ರಾಧ್ಯಾಪಕ ಡಾ. ರೇವಪ್ಪ ಕಾಂತಾ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ, ಭಾಜಪದ ನಿಷ್ಠಾವಂತ ಕಾರ್ಯಕರ್ತರಾಗಿ ನಾವೆಲ್ಲ `ಆರೋಗ್ಯ ಸೇತು’ ಮತ್ತು `ಆರೋಗ್ಯ ಮಿತ್ರ’ ಆ್ಯಪ್ಗಳನ್ನು ವ್ಯಾಪಕವಾಗಿ ಪರಿಚಯಿಸುವ ಕಾರ್ಯದಲ್ಲಿ, ಮುಖಗವುಸುಗಳನ್ನು ಸಿದ್ಧಪಡಿಸಿ, ಉಚಿತವಾಗಿ ವಿತರಿಸುವಲ್ಲಿ, ಹಸಿದ ಹೊಟ್ಟೆಗಳಿಗೆ ಅನ್ನ-ನೀರು ಒದಗಿಸುವಲ್ಲಿ, ಕೊರೋನಾ ಸೋಂಕನ್ನು ತಡೆಗಟ್ಟಲು ಕೈಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಅರಿವು ಮೂಡಿಸುವ ಅಭಿಯಾನದಲ್ಲಿ ತೊಡಗಿರುವಾಗ, ಈ ಮಹನೀಯರು ಇಂತ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದು ಖಂಡನೀಯ.
ಆದುದರಿಂದ ಪಕ್ಷದ ಅಧ್ಯಕ್ಷರು `ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದು ತಳ್ಳಿ ಹಾಕದೇ, ಶಿಸ್ತಿನ ಕ್ರಮ ಜರುಗಿಸಬೇಕು ಮುಖ್ಯಮಂತ್ರಿಗಳಿಗೆ ಹಾಗೂ ಪಕ್ಷದ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಮೂರು ತುಟ್ಟಿಭತ್ಯೆಗಳ ಸ್ಥಗಿತದಂತಹ ದಿಟ್ಟ ಹಾಗೂ ಸೂಕ್ಷ್ಮ ನಿರ್ಧಾರವನ್ನು ಕೈ ಬಿಡಬೇಕು ಅಥವಾ ಮರು ಪರಿಶೀಲಿಸಬೇಕೆಂಬ ಮನವಿಗೆ ಆರು ಲಕ್ಷ ಸರಕಾರಿ ನೌಕರರ ಪೈಕಿ ಕೆಲವರ ಮನದಲ್ಲಿಯಾದರೂ ತಿಳಿದೋ, ತಿಳಿಯದೋ ರಾಜ್ಯ ಸರಕಾರದ ವಿರುದ್ಧ ಅಸಹನೀಯ ಭಾವನೆ ಹುಟ್ಟು ಹಾಕಬಹುದೆಂಬ ಸಾಮಾನ್ಯ ಪರಿಜ್ಞಾನವಿಲ್ಲದ ಶಶೀಲ್ ನಮೋಶಿಯವರನ್ನು ತಾವು ಹಾಗೂ ಭಾಜಪದ ಪ್ರಾದೇಶಿಕ ಅಧ್ಯಕ್ಷರು ಹದ್ದುಬಸ್ತಿನಲ್ಲಿಡಬೇಕು. ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ನಮೋಶಿ ವಿರುದ್ಧ, ಪಕ್ಷದ ಅಧ್ಯಕ್ಷ ಶ್ರೀ ನಳಿನಕುಮಾರ್ ಕಟೀಲು ಅವರು ಶಿಸ್ತಿನ ಕ್ರಮಗಳನ್ನು ಜರುಗಿಸಬೇಕೆಂದು ಉಭಯ ನಾಯಕರಲ್ಲಿ ಒತ್ತಾಯಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…