ಎನ್.ಮುತ್ತಪ್ಪ ರೈ ನಿಧನಕ್ಕೆ ಜಯಕರ್ನಾಟಕ ಸುರಪುರ ತಾಲೂಕು ಘಟಕ ಕಂಬನಿ

ಸುರಪುರ: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎನ್.ಮುತ್ತಪ್ಪ ರೈ ನಿಧನಕ್ಕೆ ಸುರಪುರ ತಾಲೂಕು ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಶ್ರದ್ಧಾಂಜಲಿ ಅರ್ಪಿಸಿದರು.

ಬೆಳಿಗ್ಗೆ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಜಯಕರ್ನಾಟಕದ ಹಲವಾರು ಜನ ಮುಖಂಡರು ನಗರದ ಸಂಘದ ಕಚೇರಿ ಆವರಣದಲ್ಲಿ ಸೇರಿ ಎನ್.ಮುತ್ತಪ್ಪ ರೈ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ನಂತರ ಎರಡು ನಿಮಿಷಗಳ ಮೌನಾಚರಣೆ ನಡೆಸಿ ಸಂತಾಪ ಸೂಚಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ರವಿ ಕುಮಾರ ನಾಯಕ ಬೈರಿಮರಡಿ ಮಾತನಾಡಿ,ಮುತ್ತಪ್ಪ ರೈ ಅಣ್ಣನವರು ಈ ನಾಡು ಕಂಡ ಒಬ್ಬ ಧೀಮಂತ ಕನ್ನಡ ಹೋರಾಟಗಾರ.ಅವರು ಕನ್ನಡ ಮತ್ತು ಕನ್ನಡಿಗರ ವಿಷಯದಲ್ಲಿ ಸದಾಕಾಲ ಮುಂದಿರುತ್ತಿದ್ದ ಅವರು,ಜಯಕರ್ನಾಟಕ ಸಂಘಟನೆ ಹುಟ್ಟುಹಾಕಿ ನಮ್ಮಂತಹ ಲಕ್ಷಾಂತರ ಕನ್ನಡ ಅಭೀಮಾನದ ಮನಸ್ಸುಗಳಿಗೆ ನಾಡು ನುಡಿಯ ಸೇವೆ ಮಾಡಲು ತೊಡಗಿಸಿದ್ದರು.ಕೇವಲ ಹೋರಾಟ ಮಾತ್ರವಲ್ಲದೆ ನಾಡಿನ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ,ಶಾಲೆಗಳ ಜಿರ್ಣೋಧ್ಧಾರ,ದೇವಸ್ಥಾನಗಳಿಗೆ ಸಹಾಯ ಹೀಗೆ ಹತ್ತು ಹಲವು ಜನಪರ ಕಾರ್ಯ ಮಾಡಿದವರು.

ಇಂದು ನಮ್ಮನ್ನೆಲ್ಲ ಬಿಟ್ಟು ಹೋಗಿ ಅನಾಥರನ್ನಾಗಿಸಿದ್ದಾರೆ.ಅವರ ಮಾರ್ಗದರ್ಶನದಂತೆ ನಾಡಿನ ಸೇವೆ ಮಾಡುವ ಮೂಲಕ ಅವರನ್ನು ಜನರ ಮನದಲ್ಲಿ ಜೀವಂತವಿರಿಸುವ ಕೆಲಸ ಮಾಡುವುದಾಗಿ ತಿಳಿಸಿದರು.ಅಲ್ಲದೆ ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡುವ ಜೊತೆಗೆ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ಮಲ್ಲಪ್ಪ ನಾಯಕ ಕಬಾಡಗೇರಾ,ಶರಣಪ್ಪ ಬೈರಿಮಡಿ,ಯಲ್ಲಪ್ಪ ಕಲ್ಲೋಡಿ,ರವಿ ಹುಲಕಲ್,ರಾಘವೇಂದ್ರ ಗೋಗಿಕರ್,ಹಣಮಂತ ಶಿಬಾರಬಂಡಿ,ನಭೀ ಬೈರಿಮರಡಿ,ದೇವಪ್ಪ ಬಬಲಾದಿ,ಸಿದ್ದು ಕಾಡಂಗೇರಾ,ನಿಂಗಪ್ಪ ಹುಂಡೇಕಲ್ ಸೇರಿದಂತೆ ಅನೇಕರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420