ಕಲಬುರಗಿ: ಬಟ್ಟೆ ಮತ್ತು ರೆಡಿಮೇಡ್ ವ್ಯಾಪಾರ ಕಳೆದ ಎರಡು ತಿಂಗಳಿಂದ ಕೋವಿಡ್ ೧೯ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡಿದೆ. ಎಲ್ಲಾ ಬಟ್ಟೆ ವ್ಯಾಪಾರಿಗಳು ಹಾಗೂ ಉದ್ಯಮಿಗಳು ಸ್ಥಗಿತಗೊಳಿಸುವಿಕೆಯನ್ನು ಬೆಂಬಲಿಸುತ್ತೇವೆ ಎಂದು ಬಟ್ಟೆ ಮತ್ತು ರೆಡಿಮೇಡ್ ಅಸೋಸಿಯೇಷನ್ ಕಾರ್ಯದರ್ಶಿ ಆನಂದ ದಂಡೋತಿ ಅವರು ತಿಳಿಸಿದ್ದಾರೆ.
ಎಲ್ಲಾ ಕಾರ್ಮಿಕ ವೇತನವನ್ನು ಪಾವತಿಸಲು ಆಡಳಿತ ಹೇಳುತ್ತದೆ.ಆದರೆ ವ್ಯವಹಾರವನ್ನು ಸ್ಥಗಿತಗೋಳಿಸಿ ವೇತನವನ್ನು ಪಾವತಿಸುವುದು ಕಷ್ಟವಾಗುತ್ತಿದೆ. ಗರಿಷ್ಠ ವ್ಯಾಪಾರಸ್ಥರು ತಮ್ಮ ವ್ಯವಹಾರಕ್ಕಾಗಿ ಸಾಲವನ್ನು ತೆಗೆದುಕೊಂಡಿರುತ್ತಾರೆ. ಸಾಲವನ್ನು ಹೇಗೆ ಮರುಪಾವತಿಸುವುದು ಎಂಬ ಪ್ರಶ್ನೆಯನ್ನು ಈಗ ಅವರಲ್ಲಿ ಕಾಡುತ್ತಿದೆ.
ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬಟ್ಟೆ ಮತ್ತು ರೆಡಿಮೇಡ್ ವ್ಯಾಪಾರವು ಬಲು ಜೋರಾಗಿಯೇ ನಡೆಯುತ್ತದೆ.
ಏಪ್ರೀಲ್ ಹಾಗೂ ಮೇ ತಿಂಗಳುಗಳಲ್ಲಿ ಮದುವೆ ಸಮಾರಂಭಗಳು ಸೇರಿದಂತೆ ಇನ್ನಿತರು ಕಾರ್ಯಕ್ರಮಗಳು ನಡೆಯುವುದು ಈ ಎರಡು ತಿಂಗಳುಗಳಲ್ಲಿಯೇ ಜಾಸ್ತಿಯಾಗಿರುತ್ತದೆ. ಆದ್ದರಿಂದ ಎಲ್ಲಾ ಉದ್ಯಮಿಗಳು ಹೆಚ್ಚಿನ ಪ್ರಮಾಣದಲ್ಲಿ ಸರಕುಗಳನ್ನು ಖರೀದಿಸಿದ್ದಾರೆ. ಆದರೆ ಈ ಕೋವಿಡ್-೧೯ ಲಾಕ್ ಡೌನ್ ನಿಂದ ಎಲ್ಲಾ ಸರಕುಗಳು ಡೆಡ್ ಸ್ಟಾಕ್ ಆಗಿವೆ ಎಂದು ಎಲ್ಲಾ ಉದ್ಯಮಿಗಳು ಹಾಗೂ ವ್ಯಾಪಾರಿಗಳು ಆತಂಕದ ಸ್ಥತಿಯಲ್ಲಿದ್ದಾರೆ.
ಎಲ್ಲಾ ಸಮಸ್ಯೆಗಳಿಂದ ಚೇತರಿಸಿಕೊಳ್ಳಲು ಜಿಲ್ಲಾಡಳಿತವು ಬಟ್ಟೆ ಮತ್ತು ರೆಡಿಮೇಡ್ ಅಂಗಡಿಗಳನ್ನು ತೆರೆಯಲು ಮಾನದಂಡಗಳನ್ನು ಅನುಸರಿಸಿ ಅನುಮತಿ ನೀಡಬೇಕು ಎಂದು ದಂಡೋತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…