ಬಿಸಿ ಬಿಸಿ ಸುದ್ದಿ

ದತ್ತಾತ್ರೇಯ ಇಕ್ಕಳಕಿಗೆ ಶಾಸಕ ಪ್ರಿಯಾಂಕ್ ಖರ್ಗೆ ಅಭಿನಂದನ ಪತ್ರ

ಮಾನ್ಯ ದತ್ತಾತ್ರೇಯ ಇಕ್ಕಳಕಿ ಅವರಿಗೆ ನಮಸ್ಕಾರಗಳು,

ನೀವು ಬರೆದ ಪತ್ರವು ನನಗೆ ತಲುಪಿದೆ. ಕೊರೋನಾ ಸಂಕಷ್ಟದ ಸಮಯದಲ್ಲಿ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ನಾನು ನನ್ನ ಕೆಲಸಗಳನ್ನು ಮಾಡುತ್ತಿದ್ದೇನೆ. ನನ್ನ ಈ ಕಾರ್ಯಗಳ ಕುರಿತು ನಿಮ್ಮ ಮೆಚ್ಚುಗೆಯ ನುಡಿಗಳಿಗೆ ಹಾಗೂ ಕಾಳಜಿಗೆ ನಾನು ಆಭಾರಿಯಾಗಿದ್ದೇನೆ.

ಕಳೆದ 5 ದಶಕಗಳಿಂದ ಈ ಭಾಗದ ಜನತೆ ನನ್ನ ಹಾಗೂ ನಮ್ಮ ತಂದೆಯವರ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ನಾವು ಸಲ್ಲಿಸುತ್ತಿರುವ ಅಳಿಲು‌ ಸೇವೆ ಇದು. ನಮ್ಮ ಜನ ಸಂಕಷ್ಟದಲ್ಲಿರುವಾಗ ಅವರ ಸಹಾಯಕ್ಕೆ ಧಾವಿಸುವುದು ಯಾವುದೇ ಮಾನವೀಯ ವ್ಯಕ್ತಿಯ ಪ್ರಥಮ ಆದ್ಯತೆಯಾಗಬೇಕು. ಇದು ನಮ್ಮ ಹೊಣೆ ಹಾಗೂ ಕರ್ತವ್ಯವೂ ಹೌದು. ಇದೇ ಜನತೆಯ ಆಶೀರ್ವಾದದಿಂದ ನಾವು ಇಂದು ಈ ಮಟ್ಟಕ್ಕೆ ಬೆಳೆದಿದ್ದೇವೆ. ನನ್ನ ಹಾಗೂ ನಮ್ಮ ತಂದೆಯವರ ಮೇಲೆ ಈ ಭಾಗದ ಜನರ ತೀರಿಸಲಾಗದಷ್ಟು ಋಣವಿದೆ. ಜನ ನಮಗೆ ಅಧಿಕಾರ ನೀಡಿರುವುದು ಅವರ ಸೇವೆ ಮಾಡಲು ಎಂಬುವುದನ್ನು ಅರಿತು ಅವರ ಕಷ್ಟಕ್ಕೆ ಹೆಗಲು ನೀಡುತ್ತಿದ್ದೇವೆ ಅಷ್ಟೇ.

” ಒಬ್ಬ ಮಹಾನ್ ವ್ಯಕ್ತಿಯು ಖ್ಯಾತ ವ್ಯಕ್ತಿಯಿಂದ ಭಿನ್ನವಾಗಿರುತ್ತಾನೆ, ಏಕೆಂದರೆ ಅವರು ಸಮಾಜದ ಸೇವಕರಾಗಲು ಸಿದ್ಧರಾಗಿದ್ದಾರೆ ” ಎಂಬ ಅಂಬೇಡ್ಕರ್ ಅವರ ನುಡಿಯನ್ನು ನಂಬಿ ನಾನು ಅವರ ಹಾದಿಯಲ್ಲಿ ನಡೆಯುತ್ತಿದ್ದೇನೆ.

ಈ ಭಾಗದ ಜನರು ನನ್ನನ್ನು ನಂಬಿ ಅವರ ಸೇವೆಗಾಗಿ ನನ್ನನ್ನು ಆಯ್ಕೆಮಾಡಿ ವಿಧಾನಸಭೆಗೆ ಕಳುಹಿಸಿದ್ದಾರೆ. ಈ ಭಾಗದ ಪ್ರತಿ ಪ್ರಜೆಯ ಕಷ್ಟ – ಸುಖಗಳಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯವೆಂದು ನಂಬಿದ್ದೇನೆ. ಮುಂದೆಯೂ ಅವರ ನಂಬಿಕೆ ಉಳಿಸಿಕೊಳ್ಳುವತ್ತ ನನ್ನ ಪ್ರಯತ್ನ ಮುಂದುವರೆಸುತ್ತೇನೆ. ನಿಮ್ಮ ಪ್ರಶಂಸೆಯ ನುಡಿಗಳು ಸದಾ ಸ್ಪೂರ್ತಿದಾಯಕವಾಗಿ ಜನಪರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗಲು ನನಗೆ ಮತ್ತಷ್ಟು ಇಂಬು ನೀಡಿದಂತಿದೆ.

emedialine

Recent Posts

ಅಭಿವೃಧ್ಧಿಗಾಗಿ ಶ್ರಮಿಸಿದ ಎಲ್ಲರಿಗೂ ನನ್ನ ಸೆಲ್ಯೂಟ್: ಶಾಸಕ ಆರ್.ವಿ ನಾಯಕ

ಸುರಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದವರಲ್ಲಿ ನಮ್ಮ ಸುರಪುರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಸೇರಿ ಎಲ್ಲಾ ಹೋರಾಟಗಾರರಿಗೆ ಹಾಗೂ…

6 hours ago

ಫೋಟೋ ಜರ್ನಲ್ ಲಿಸ್ಟ್ ಶಿವಶರಣ ಬೆಣ್ಣೂರ್ ಗೆ ಜಿಲ್ಲಾಡಳಿತದಿಂದ ಸನ್ಮಾನ

ಕಲಬುರಗಿ: ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಏರ್ಪಡಿಸಿದ ಛಾಯಾಚಿತ್ರ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ವಿಶೇಷ ಪ್ರಶಸ್ತಿ ಪಡೆದ ವಿಜಯ…

6 hours ago

ಜೈಭಾರತ ಮಾತಾ ಸೇವಾ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಆಳಂದ: ತಾಲೂಕಿನ ಲಾಡ ಚಿಂಚೊಳಿಯ ಭಾರತ ಮಾತಾ ಮಂದಿರದಲ್ಲಿ ಜೈಭಾರತ ಮಾತಾ ಸೇವಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ್ಯೋತ್ಸವ…

6 hours ago

ಸುರಪುರ:ತಾಲೂಕಿನ ವಿವಿಧ ಕಡೆಗಳಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಸುರಪುರ:ತಾಲೂಕಿನಾದ್ಯಂತ ವಿವಿಧ ಕಡೆಗಳಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ದಿಂದ ಆಚರಿಸಲಾಗಿದೆ. ನಗರದ ಕಾಂಗ್ರೆಸ್ ಕಚೇರಿ ವಸಂತ ಮಹಲ್,ಮಹಾತ್ಮ ಗಾಂಧಿ…

6 hours ago

ಶಶೀಲ್ ನಮೋಶಿಯ ಅಧ್ಯಕ್ಷತೆಯಲ್ಲಿ ಬಸವೇಶ್ವರ ಆಸ್ಪತ್ರೆ ಬದಲಾವಣೆ ಕಂಡಿದೆ: ಪೂಜ್ಯ ಷ ಬ್ರ ಗಂಗಾದರಯ್ಯ ಮಹಾಸ್ವಾಮೀಜಿ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪ್ರತಿಷ್ಟಿತ ಬಸವೇಶ್ವರ ಭೊದನಾ ಮತ್ತು ಸಾರ್ವಜನಿಕ ಆಸ್ಪತ್ರೆಯ ಅತಿಕಡಿಮೆ ಬೆಲೆಯಲ್ಲಿ ತಯಾರದ ಇತರ…

7 hours ago

ಜೇವರ್ಗಿ: 42 ವಿಕಲಚೇತನರಿಗೆ ಮೋಟಾರೀಕೃತ ಟ್ರೈಸೈಕಲ್‌ಗಳ ವಿತರಣೆ

ಜೇವರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರು, ಜೇವರ್ಗಿ ಶಾಸಕರಾದ ಡಾ. ಅಜಯ್‌ ಧರ್ಮಸಿಂಗ್‌ ಅವರು ಗುರುವಾರ ಜೇವರ್ಗಿಯ ತಾಲೂಕು…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420