ಶಹಾಬಾದ: ನಗರದಲ್ಲಿ ವಿವಿಧ ರಾಜ್ಯದಿಂದ ವಲಸೆ ಬಂದ ಕಾರ್ಮಿಕರಿಗೆ ಕೊರಂಟೈನ್ ಮಾಡಲಾದ ಶಾಸಕರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜಿಇ ಕಾಲೋನಿಯ ಎಂಸಿಸಿ ಶಾಲೆಗೆ ಶಾಸಕ ಬಸವರಾಜ ಮತ್ತಿಮಡು ಭೇಟಿ ನೀಡಿ ವಲಸೆ ಕಾರ್ಮಿಕರ ಆರೋಗ್ಯ ವಿಚಾರಿಸಿದರು.
ನಗರದ ವ್ಯಾಪ್ತಿಯ ಎರಡು ಕೊರಂಟೈನ್ ಕೇಂದ್ರಗಳಿಗೆ ಬೇಟಿ ನೀಡಿದ ಶಾಸಕ ಬಸವರಾಜ ಮತ್ತಿಮಡು, ಕೊರಂಟೈನ್ ಕೇಂದ್ರದಲ್ಲಿ ಆಹಾರ, ತಿಂಡಿ, ನೀರು ಸರಿಯಾದ ಸಮಯಕ್ಕೆ ಸಿಗುತ್ತಿದೆಯೇ ಎಂದು ವಿಚಾರಿಸಿ, ಆಹಾರ ಪೂರೈಕೆಯಲ್ಲಿ ಅಲ್ಪಸ್ವಲ್ಪ ವಿಳಂಬವಾದಲ್ಲಿ ತಾಲೂಕಾಡಳಿತಕ್ಕೆ ಸಹಕರಿಸಿ ಎಂದು ಮನವಿ ಮಾಡಿದರು. ಸರ್ಕಾರ ನಿಮ್ಮ ಹಾಗೂ ಜನರ ಆರೋಗ್ಯ ದೃಷ್ಠಿಯಿಂದ ನಿಮಗೆಲ್ಲಾ ಕೊರಂಟೈನ್ ಮಾಡಲಾಗಿದ್ದು, ಸರ್ಕಾರದ ನಿಯಮಗಳಿಗೆ ಚಾಚು ತಪ್ಪದೇ ಅನುಸರಿಸಿ ಎಂದು ಹೇಳಿದರು.
ತಹಶೀಲ್ದಾರ ಸುರೇಶ ವರ್ಮಾ ಮಾತನಾಡಿ ಗರ್ಭೀಣಿ, ವಯೋವೃದ್ಧ ಹಾಗೂ ಮಕ್ಕಳಿಗೆ ಶೌಚಾಲಯ ಒಳಗೊಂಡ ಕೋಣೆಯನ್ನು ಹೊಂದರಿವ ಕೋಣೆ ಅಥವಾ ಕಟ್ಟಡವನ್ನು ತೋರಿಸಿದರೇ, ಆ ಕಟ್ಟಡವನ್ನು ಅಧಿಕಾರಿಗಳು ಪರಿಶೀಲಿಸಿ ಅವರನ್ನು ಪ್ರತ್ಯೇಕವಾಗಿ ಹೋಮ್ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುವದು ಎಂದು ತಿಳಿಸಿದರು.
ಪೌರಾಯುಕ್ತ ವೆಂಕಟೇಶ, ಪಿಐ ಬಿ.ಅಮರೇಶ, ನೈರ್ಮಲ್ಯ ನಿರೀಕ್ಷಕ ಶಿವುಕುಮಾರ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಸುಭಾಷ ಜಾಪೂರ, ನಾಗರಾಜ ಮೇಲಗಿರಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…