ಶಹಾಪುರ: ಕೊರೋನಾ ವೈರಸ್ ಕೋವಿಡ್ – 19 ಸಮರದಲ್ಲಿ ಹಗಲಿರುಳು ಸೇವೆ ಸಲ್ಲಿಸಿದ ತಾಲ್ಲೂಕಿನ ಕಾಟಮನಹಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ದಾನಮ್ಮಳಿಗೆ ಶಹಾಪುರ ತಾಲ್ಲೂಕಿನ ಕಿರಾಣಾ ವ್ಯಾಪಾರಸ್ಥರಿಂದ ಐದು ಸಾವಿರ ರೂಪಾಯಿಗಳ ಧನ ಸಹಾಯ ನೀಡಿ ಮಾನವೀಯತೆ ಮೆರೆದಿದ್ದಾರೆ.
ಲಾಕ್ ಡೌನ್ ಸಂದರ್ಭದೊಳಗೆ ಹೆತ್ತ ಮಗನಿಗೆ ರಸ್ತೆ ಅಪಘಾತ ಸಂಭವಿಸಿ ಸುಮಾರು ಇಪ್ಪತ್ತು ದಿನಗಳ ಕಾಲ ಕೋಮಾದಲ್ಲಿದ್ದರು ಮಗನನ್ನು ಲೆಕ್ಕಿಸದೇ ಧೈರ್ಯದಿಂದ ಕರೋನಾ ಯುದ್ಧದ ಸೇವೆಗೆ ನಿರಂತರವಾಗಿ ಹಾಜರಾದ ಆಶಾ ಕಾರ್ಯಕರ್ತೆ ದಾನಮ್ಮಳ ಸೇವೆ ನಿಜಕ್ಕೂ ಶ್ಲಾಘನೀಯವಾದದ್ದು ಎಂದು ಬಣ್ಣಿಸಿದರು.
ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾದ ಮಗನ ಚಿಕಿತ್ಸೆಗಾಗಿ ಆರ್ಥಿಕ ಸಂಕಷ್ಟಕ್ಕೊಳಗಾದ ಈ ಬಡ ಕುಟುಂಬಕ್ಕೆ ತಮ್ಮ ಕೈಲಾದಷ್ಟು ವೈಯಕ್ತಿಕ ಧನ ಸಹಾಯ ನೀಡಿ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ.
ಈ ಸಂದರ್ಭದಲ್ಲಿ ಶಹಾಪುರ ತಾಲ್ಲೂಕ ಕಿರಾಣಾ ವ್ಯಾಪಾರಸ್ಥರ ಸಂಘದ ಯುವ ಮುಖಂಡರಾದ ರಾಜು ಆನೆಗುಂದಿ,ಶಾಂತು ತೋಟಿಗೇರ, ದೀಕ್ಷಿತ್, ಮಹಾಂತೇಶ್ ರಾಂಪುರ, ಅರವಿಂದ್ ಉಪ್ಪಿನ್, ಅಶೋಕ್, ಅರ್ಜುನ್, ಮಾದೇಶ್ ಮಂಗಲ್, ವೀರೇಶ್, ಬಸು ಹಾಗೂ ಇತರರು ಹಾಜರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…