ಸೇಡಂ : ತಾಲ್ಲೂಕಿನ ಊಡಗಿ ಗ್ರಾಮದಲ್ಲಿ ಇಂದು ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಹಸು ಒಂದ ಮೃತಪಟ್ಟಿರುವ ಘಟನೆ ಬೆಳಗ್ಗಿನ ಜಾವ ನಡೆದಿದೆ.
ಶಿವಪ್ಪ ಪಟ್ಲಿ ಎಂಬುವರಿಗೆ ಸೇರಿದ ಹಸು. ಕಳೆದ ಎರಡು ದಿನಗಳ ಹಿಂದೆ ಮೊಹರಮ್ ಮಸೀದಿ ಹತ್ತಿರ ಮಳೆ- ಗಾಳಿಯಿಂದ ವಿದ್ಯುತ್ ಕಂಬ ಬಿದ್ದಿರುವ ಘಟನೆ ಗ್ರಾಮದಲ್ಲಿ ನಡೆದಿತ್ತು. ಆದರೆ ಅದರುಷ್ಟವಶಾತ
ಯಾವುದೇ ಅಪಾಯ ಸಂಭವಿಸಿರಲಿಲ್ಲ. ವರ್ಷಗಳಿಂದ ಕೆಲವು ವಿದ್ಯುತ್ ಕಂಬಗಳು ಬೀರುಕ್ಕು ಬಿಟ್ಟು ಶಿಥಿಲಗೊಂಡು ಅಪಘಾತಕ್ಕೆ ಆಹ್ವಾನ ನೀಡುವ ಸ್ಥಿತಿಯಲ್ಲಿದ್ದು, ಗ್ರಾಮದ ಜನರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.
ಹಲವು ಬಾರಿ ವಿದ್ಯುತ್ ಇಲಾಖೆಗೆ ದೂರು ನೀಡಿದರು ಸಂಬಂಧ ಪಟ್ಟ ಅಧಿಕಾರಿಗಳು ಕ್ಯಾರೆ ಏನ್ನುತ್ತಿಲ್ಲ ಎಂದು ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೆ.ಇ.ಬಿ ಮತ್ತು ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ವಿದ್ಯುತ್ ತಂತಿ ನೆಲಕ್ಕೆ ಹಸು ಸ್ಥಳದಲ್ಲೇ ಸಾವನಪ್ಪಿದೆ. ಇಂತಹ ಘಟನೆಗೆ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಅಗುವ ಭಾರಿ ಅನಾಹುತ ತಡೆಯಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಈ ಕುರಿತು ಸೇಡಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…