ಕಲಬುರಗಿ: ಜಿಲ್ಲೆಯಲ್ಲಿ ಶನಿವಾರ ಮತ್ತೆ ಎಂಟು ಜನರಿಗೆ ಕೊರೋನಾ ಸೋಂಕು ದೃಢವಾಗಿದ್ದು, ಇದರಿಂದ ಸೋಂಕಿತರ ಸಂಖ್ತೆ 94ಕ್ಕೆ ಏರಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.
ಕಲಬುರಗಿ ನಗರದ ರೋಗಿ ಸಂಖ್ಯೆ-848 ಸಂಪರ್ಕದಲ್ಲಿ ಬಂದ ಮೋಮಿನಪುರ ಪ್ರದೇಶದ 33 ವರ್ಷದ ಯುವತಿ (P-1080), 15 ವರ್ಷದ ಬಾಲಕಿ (P-1081), 14 ವರ್ಷದ ಬಾಲಕಿ (P-1082), 55 ವರ್ಷದ ಮಹಿಳೆ (P-1083), 60 ವರ್ಷದ ಪುರುಷ (P-1086) ಹಾಗೂ 10 ವರ್ಷದ ಬಾಲಕಿ (P-1087) ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಹುಮನಾಬಾದ ಬೇಸ್-ಮೋಮಿನಪುರ ಕಂಟೇನ್ ಮೆಂಟ್ ಝೋನ್ ಪ್ರದೇಶದಲ್ಲಿ ಕಳೆದ ಮೇ-11 ರಂದು ಕೊರೋನಾ ಸೋಂಕಿನಿAದ ಮೃತ ವ್ಯಕ್ತಿಯ ಸಂಪರ್ಕದಲ್ಲಿ ಬಂದ ಇದೇ ಪ್ರದೇಶದ 50 ವರ್ಷದ ಮಹಿಳೆಗೂ (P-1085) ಕೋವಿಡ್-19 ಅಂಟುಕೊAಡಿದೆ.
ಇದಲ್ಲದೆ ಇತ್ತೀಚೆಗೆ ಮುಂಬೈನಿAದ ವಲಸೆ ಬಂದು ಚಿತ್ತಾಪುರದ ನಾಗಾವಿ ಬಳಿಯ ಮೋರಾರ್ಜಿ ದೇಸಾಯಿ ವಸತಿಯ ಶಾಲೆ ಕ್ವಾರಂಟೈನ್ ಸೆಂಟರ್ ನಲ್ಲಿದ್ದ ಚಿತ್ತಾಪುರ ತಾಲೂಕಿನ ಬೆಳಗೇರಾ ತಾಂಡಾ ಮೂಲದ 30 ವರ್ಷದ ಮಹಿಳೆಗೂ ಕೊರೋನಾ ಸೋಂಕು ದೃಢವಾಗಿದ್ದು, ಇವರನ್ನು ಈಗಾಗಲೆ ಕ್ವಾರಂಟೈನ್ ಸೆಂಟರ್ನಿAದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದರಿಂದ ಜಿಲ್ಲೆಯಲ್ಲಿ ಕೊರೋನಾ ಪೀಡಿತ 94 ರೋಗಿಗಳಲ್ಲಿ 7 ಜನ ನಿಧನರಾಗಿದ್ದು, 47 ರೋಗಿ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಳಿದಂತೆ 40 ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…
ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…
ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…