ಸುರಪುರ: ಕೊರೊನಾ ಎಲ್ಲೆಡೆ ರಣಕೇಕೆ ಹಾಕುತ್ತಿದ್ದು ಸುರಪುರ ನಗರದ ಆಸರ ಮೊಹಲ್ಲಾದ ಇಬ್ಬರಲ್ಲಿ ಕೊರೊನಾ ಸೊಂಕು ದೃಢಪಟ್ಟು ನಗರದ ಜನರಲ್ಲಿ ಭಯ ಮೂಡಿಸಿದೆ. ಇದರಿಂದ ಜಿಲ್ಲಾಧಿಕಾರಿಗಳು ಆಸರ ಮೊಹಲ್ಲಾವನ್ನು ಕಾಂಟೋನ್ಮೆಂಟ್ ಝೋನ್ ಎಂದು ಘೋಷಿಸಿ ಇಲ್ಲಿಯ ಜನರು ಮನೆಯಿಂದ ಹೊರಗೆ ಬರದಂತೆ ಹಾಗು ಅವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವಂತೆ ಆದೇಶ ಮಾಡಿದ್ದರು.
ಅಲ್ಲದೆ ಆಸರ ಮೊಹಲ್ಲಾದಿಂದ ಸುತ್ತಲೂ 5 ಕಿ.ಮಿ ಬಫರ್ ಝೋನ್ ಎಂದು ಘೋಷಿಸಲಾಗಿದೆ.ಇದಲ್ಲದೆ ಲಾಕ್ಡೌನ್ ಜಾರಿಯಲ್ಲಿದ್ದು ಜನರು ಅನಾವಶ್ಯಕವಾಗಿ ಹೊರಗೆ ತಿರುಗಾಡದಂತೆ ಪೊಲೀಸ್ ಇಲಾಖೆ ಹಾಗು ನಗರಸಭೆಯ ಸಿಬ್ಬಂದಿ ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ.ಆದರೆ ಜನರು ಮಾತ್ರ ಇದಕ್ಕೂ ತಮಗೂ ಸಂಬಂಧವಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ.
ನಗರದ ವಿವಿಧೆಡೆಗಳಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ,ಹಣ್ಣು ಹಂಪಲು ಹಾಲು ಮಾರಾಟಕ್ಕೂ ವ್ಯವಸ್ಥೆ ಮಾಡಲಾಗಿದೆ.ಅಲ್ಲದೆ ನಗರದ ವಿವಿಧ ಭಾಗಗಳಲ್ಲಿ ಕಿರಾಣಿ ಅಂಗಡಿಗಳೂ ಕೂಡ ತೆಗೆದಿರುತ್ತವೆ.ಆದರೆ ಜನರು ಮಾತ್ರ ಈ ಮುಂಚೆಯ ಮಾರುಕಟ್ಟೆಗಳಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿ ಜನ ದಟ್ಟಣೆ ನಿರ್ಮಿಸುತ್ತಿದ್ದಾರೆ.ಇದರಿಂದ ಲಾಕ್ಡೌನ್ ನಿಯಮ ಕೂಡ ಲೆಕ್ಕಕ್ಕಿಲ್ಲದಂತಾಗಿದೆ. ಅನವಾಶ್ಯಕವಾಗಿ ಜನರು ಸೇರುವ ಮೂಲಕ ನಗರದ ಜನರಲ್ಲಿ ಭಯದ ವಾತಾವರಣೆ ಸೃಷ್ಟಿಸುತ್ತಿರುವಂತಿದೆ.
ಈಗಾಗಲೆ ನಗರದ ಇಬ್ಬರಲ್ಲಿ ಕೊರೊನಾ ಸೊಂಕು ದೃಢವಾಗಿ ಜನರು ಭಯದಲ್ಲಿದ್ದಾರೆ.ಅಲ್ಲದೆ ವಲಸೆ ಹೋಗಿ ಬಂದಿರುವ ತಾಲೂಕಿನ ಸಾವಿರಾರು ಜನರಲ್ಲಿ ಯಾರಿಗೆ ಕೊರೊನಾ ಸೊಂಕಿದೆಯೋ ಎಂದು ಸದಾಕಾಲ ಚಿಂತೆಗೀಡು ಮಾಡಿದೆ.ಇದರ ಮದ್ಯೆ ಜನರು ಹೀಗೆ ಬೇಕಾಬಿಟ್ಟಿಯಾಗಿ ಓಡಾಡುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ.ಇದಕ್ಕೆ ಜಿಲ್ಲಾ ಮತ್ತು ತಾಲೂಕು ಆಡಳಿತ ಕಡಿವಾಣ ಹಾಕಬೇಕಿರುವುದು ಅವಶ್ಯಕವಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…