ಸುರಪುರ: ದೇವತ್ಕಲ್ ಗ್ರಾಮ ಲೆಕ್ಕಿಗ ಪ್ರತಾಪ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದನ್ನು ವಿಳಂಭ ಮಾಡುತ್ತಿರುವುದರಿಂದ ನೊಂದ ಗ್ರಾಮ ಲೆಕ್ಕಿಗರು ನಮ್ಮ ಸಂಘದ ರಾಜ್ಯ ಸಮಿತಿ ನಿರ್ಧಾರದಂತೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗುವ ನಿರ್ಧಾರ ಮಾಡಲಾಗಿತ್ತು,ಆದರೆ ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಯಾದಗಿರಿ ಅಪರ ಜಿಲ್ಲಾಧಿಕಾರಿಗಳು ತಿಳಿಸಿದಂತೆ ಗ್ರಾಮ ಲೆಕ್ಕಿಗರ ಮೇಲಿನ ಪೊಲೀಸರ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು,ಸದ್ಯ ಕೋವಿಡ್-19 ನಿರ್ಮೂಲನೆಯ ವಿಷಯ ಪ್ರಮುಖವಾಗಿರುವುದರಿಂದ ಈ ಕೋವಿಡ್-19 ಕೆಲಸ ಮುಗಿಯುವವರೆಗೆ ಸಹನೆ ಕಾಯ್ದುಕೊಳ್ಳುವಂತೆ ಸೂಚಿಸಿದ್ದರಿಂದ, ಮಾನ್ಯ ಜಿಲ್ಲಾಧಿಕಾರಿಗಳು ಮತ್ತು ಅಪರ ಜಿಲ್ಲಾಧಿಕಾರಿಗಳ ಸೂಚನೆಯಂತೆ ಎಲ್ಲಾ ಗ್ರಾಮ ಲೆಕ್ಕಿಗರು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗುವುದನ್ನು ಕೈಬಿಟ್ಟು,ಕೆಲಸಕ್ಕೆ ಎಲ್ಲರು ಹಾಜರಾಗಿದ್ದೇವೆ.
ಆದರೆ ಹಿಂದಿನಿಂದಲೂ ಗ್ರಾಮ ಲೆಕ್ಕಿಗರ ಮೇಲೆ ಪೊಲೀಸರ ಹಲ್ಲೆಗಳಾದಾಗ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಎಲ್ಲಾ ಗ್ರಾಮ ಲೆಕ್ಕಿಗರು ತುಂಬಾ ನೊಂದಿದ್ದೇವೆ.ಅದು ಈಗ ಪ್ರತಾಪರ ಮೇಲೆ ಮತ್ತೆ ಹಲ್ಲೆಯಾಗುವ ಮೂಲಕ ಸಾಬೀತಾಗಿದೆ.ಆದ್ದರಿಂದ ನಮ್ಮ ಮನವಿಯನ್ನು ಕಡೆಗಣಿಸದೆ ಒಂದು ವಾರದೊಳಗೆ ಮಾನ್ಯ ಜಿಲ್ಲಾಧಿಕಾರಿಗಳು ಹಲ್ಲೆ ಮಾಡಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕೆಂದು ವಿನಂತಿಸುವುದಾಗಿ ತಾಲೂಕು ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷ ಪ್ರದೀಪ್ ನಾಲ್ವಡೆ ಜಿಲ್ಲಾಧಿಕಾರಿಗಳಲ್ಲಿ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…