ಸೇಡಂ : ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ಶಾಸಕರು ಸರ್ಕಾರದ ಭಾಗವಾಗಿದೆ ಎಲ್ಲೆಡೆಯೂ ಸಂಚಾರಕ್ಕೆ ಅವಕಾಶವಿದೆ ಎಂದಿದ್ದಾರೆ. ಅದರೆ ಶಾಸಕ ಸರ್ಕಾರದ ಭಾಗವಲ್ಲ ಎಂಬುವುದು ತೇಲ್ಕೂರ ಅರಿತುಕೋಳಬೇಕು ಕಾನೂನಿನ ತರಬೇತಿ ನನಗೆ ಅವಶ್ಯಕತೆ ಇಲ್ಲಾ ಶಾಸಕರಿಗೆ ಆಡಳಿತ ಬಗೆ ಡಿಪಿಆರ್ ಗೆ ಪತ್ರ ಬರೆದರೆ ಕಾನೂನು ಇತಿ ಮಿತಿಗಳ ಬಗ್ಗೆ ತಿಳಿಸುತ್ತಾರೆ ಎಂದು ತಿರುಗೇಟು ನೀಡಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಕರೋನಾ ಮಹಾಮರಿಯಿಂದ ಇಡೀ ದೇಶವೇ ತತ್ತರಿಸಿದೆ ಇದರ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದ ಸಂಕಷ್ಟ ದಲ್ಲಿ ಇರುವ ಜನರ ಸಮಸ್ಯೆಯನ್ನು ಆಲಿಸಲು ಸುಲೆಪೇಟ್ ಗೆ ಹೋಗಿದ್ದೆನೆ.ಹೊರತು ರಾಜಕೀಯ ಸಭೆ ನಡೆಸಲು ಅಲ್ಲ. ದುರುದ್ದೇಶದಿಂದ ನನ್ನ ಮೇಲೆ ಕೇಸ್ ಹಾಕಿದ್ದಾರೆ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಮತ್ತು ಸಂಸದರು ಉಮೇಶ್ ಜಾಧವ್ ಒತ್ತಡಕ್ಕೆ ಪ್ರಕರಣ ದಾಖಲಾಗಿದೆ. ಇದ್ಯಾವುದಕೂ ನಾವು ಹೆದರಲ್ಲಾ ಎಂದು ಗುಡಿಗಿದರು.
ಉದ್ಯೋಗ ಖಾತ್ರಿ ಯುಪಿಎ ಕೊಡುಗೆ, ಈ ಉದ್ಯೋಗ ಖಾತ್ರಿ ಯೋಜನೆಯ ಜಾರಿವೇಳೆ ಮೋದಿ ಅಪಹಾಸ್ಯ ಮಾಡಿದ್ದರು.ಮತ್ತು ಕೇಂದ್ರ ಸರ್ಕಾರ ಘೋಷಿಸಿದ ೨೦ಲಕ್ಷ ಕೋಟಿ ಪ್ಯಾಕೇಜ್ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಇದರಿಂದ ಬಡವರಿಗೆ ನಯ್ಯಾಪೈಸೆ ಲಾಭವಿಲ್ಲ.ಬಡವರಿಗೆ ಕೇವಲ ಕಣ್ಣೂರಿಸುವ ತಂತ್ರವಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಸೇಡಂ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ನಾಗೇಶ್ವರಾವ ಮಾಲಿಪಾಟೀಲ, ಮುದೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟರಾಮ ರೆಡ್ಡಿ ಕಡತಾಳ,ಸತೀಶ್ ರೆಡ್ಡಿ ಪಾಟೀಲ್ ರಂಜೋಳ,ಸುದರ್ಶನ ರೆಡ್ಡಿ ಪಾಟೀಲ್,ರಾಜಶೇಖರ ಪುರಾಣಿಕ,ಉಮಾ ರೆಡ್ಡಿ ಹಂದರಕಿ ಮತ್ತು ಸಂತೋಷ ತಳವಾರ ಇತರರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…