ಕಲಬುರಗಿ: ಮಹಾರಾಷ್ಟ್ರ ರಾಜ್ಯದಿಂದ ವಲಸೆ ಬಂದ ಕಲಬುರಗಿ ಜಿಲ್ಲೆಯ 11 ಜನರಲ್ಲಿ ಮಂಗಳವಾರ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 125ಕ್ಕೆ ಏರಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.
ಮುಂಬೈ ಪ್ರವಾಸ ಹಿನ್ನೆಲೆಯ ಕಾಳಗಿ ತಾಲೂಕಿನ ಕೋಡ್ಲಿ ತಾಂಡಾ ಮೂಲದ 7 ವರ್ಷದ ಬಾಲಕ (P-1257), 32 ವರ್ಷದ ಯುವಕ (P-1262), 30 ವರ್ಷದ ಯುವತಿ (P-1266) ಮತ್ತು ಬುಗಡಿ ತಾಂಡಾ ಮೂಲದ 42 ವರ್ಷದ ಪುರುಷ (P-1258) ಹಾಗೂ 18 ವರ್ಷದ ಯುವತಿ (P-1259) ಕೊರೋನಾ ಸೋಂಕು ಕಂಡುಬಂದಿದೆ.
ಕಾಳಗಿ ತಾಲೂಕಿನ ಅರಣಕಲ್ ತಾಂಡಾ ಮೂಲದ 8 ವರ್ಷದ ಬಾಲಕಿ (P-1260), 21 ವರ್ಷದ ಯುವತಿ (P-1263) ಹಾಗೂ 32 ವರ್ಷದ ಯುವಕನಿಗೆ (P-1267) ಕೊರೋನಾ ಸೋಂಕು ಅಂಟುಕೊಂಡಿದೆ. ಚಿತ್ತಾಪುರ ತಾಲೂಕಿನ ನಾಲವಾರ ಮೂಲದ 35 ವರ್ಷದ ಮಹಿಳೆ (P-1261) ಮತ್ತು 40 ವರ್ಷದ ಪುರುಷ (P-1264) ರಲ್ಲಿಯೂ ಕೋವಿಡ್-19 ದೃಢವಾಗಿದೆ.
ಇನ್ನೂ ಕಲಬುರಗಿಯ ಹಳೇ ಜೇವರ್ಗಿ ರಸ್ತೆಯ ಪಂಚಶೀಲ ನಗರದ 30 ವರ್ಷದ ಮಹಿಳೆಗೂ (P-1265) ಕೊರೋನಾ ಸೋಂಕು ತಗುಲಿದೆ. 11 ಜನ ಸೋಂಕಿತರ ಪೈಕಿ ಪಂಚಶೀಲ ನಗರದ 30 ವರ್ಷದ ಮಹಿಳೆ ಹೊರತುಪಡಿಸಿ ಉಳಿದೆಲ್ಲ ಕೊರೋನಾ ಸೋಂಕಿತರು ಕ್ವಾರಂಟೈನ್ ಸೆಂಟರ್ನಲ್ಲಿದ್ದವರಾಗಿದ್ದಾರೆ.
ಸೋಂಕು ದೃಢವಾದ ನಂತರ ಎಲ್ಲರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಡು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…