ಕಲಬುರಗಿಯಲ್ಲಿ ಮತ್ತೆ 11 ಜನರಿಗೆ ಕೊರೊನಾ ಪಾಜಿಟಿವ್

ಕಲಬುರಗಿ: ಮಹಾರಾಷ್ಟ್ರ ರಾಜ್ಯದಿಂದ ವಲಸೆ ಬಂದ ಕಲಬುರಗಿ ಜಿಲ್ಲೆಯ 11 ಜನರಲ್ಲಿ ಮಂಗಳವಾರ ಕೊರೋನಾ ಸೋಂಕು‌ ಪತ್ತೆಯಾಗಿದೆ. ಇದರಿಂದ‌ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 125ಕ್ಕೆ ಏರಿದೆ ಎಂದು ಡಿ.ಸಿ.ಶರತ್‌ ಬಿ. ತಿಳಿಸಿದ್ದಾರೆ.

ಮುಂಬೈ ಪ್ರವಾಸ ಹಿನ್ನೆಲೆಯ ಕಾಳಗಿ ತಾಲೂಕಿನ ಕೋಡ್ಲಿ ತಾಂಡಾ ಮೂಲದ 7 ವರ್ಷದ ಬಾಲಕ (P-1257), 32 ವರ್ಷದ ಯುವಕ (P-1262), 30 ವರ್ಷದ ಯುವತಿ (P-1266) ಮತ್ತು ಬುಗಡಿ ತಾಂಡಾ ಮೂಲದ 42 ವರ್ಷದ ಪುರುಷ (P-1258) ಹಾಗೂ 18 ವರ್ಷದ ಯುವತಿ (P-1259) ಕೊರೋನಾ‌ ಸೋಂಕು ಕಂಡುಬಂದಿದೆ.

ಕಾಳಗಿ ತಾಲೂಕಿನ ಅರಣಕಲ್ ತಾಂಡಾ ಮೂಲದ 8 ವರ್ಷದ ಬಾಲಕಿ (P-1260), 21 ವರ್ಷದ ಯುವತಿ (P-1263) ಹಾಗೂ 32 ವರ್ಷದ ಯುವಕನಿಗೆ (P-1267) ಕೊರೋನಾ‌ ಸೋಂಕು ಅಂಟುಕೊಂಡಿದೆ. ಚಿತ್ತಾಪುರ ತಾಲೂಕಿನ ನಾಲವಾರ ಮೂಲದ 35 ವರ್ಷದ ಮಹಿಳೆ (P-1261) ಮತ್ತು 40 ವರ್ಷದ ಪುರುಷ (P-1264) ರಲ್ಲಿಯೂ ಕೋವಿಡ್-19 ದೃಢವಾಗಿದೆ.

ಇನ್ನೂ ಕಲಬುರಗಿಯ ಹಳೇ ಜೇವರ್ಗಿ ರಸ್ತೆಯ ಪಂಚಶೀಲ ನಗರದ 30 ವರ್ಷದ ಮಹಿಳೆಗೂ (P-1265) ಕೊರೋನಾ‌ ಸೋಂಕು ತಗುಲಿದೆ. 11 ಜನ ಸೋಂಕಿತರ ಪೈಕಿ ಪಂಚಶೀಲ ನಗರದ 30 ವರ್ಷದ ಮಹಿಳೆ ಹೊರತುಪಡಿಸಿ ಉಳಿದೆಲ್ಲ ಕೊರೋನಾ ಸೋಂಕಿತರು ಕ್ವಾರಂಟೈನ್ ಸೆಂಟರ್‌ನಲ್ಲಿದ್ದವರಾಗಿದ್ದಾರೆ.

ಸೋಂಕು ದೃಢವಾದ‌ ನಂತರ ಎಲ್ಲರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ‌ ನೀಡಲಾಗುತ್ತಿದೆ ಎಂಡು ಡಿ.ಸಿ. ಶರತ್‌ ಬಿ. ತಿಳಿಸಿದ್ದಾರೆ.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

2 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

3 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

5 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

16 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

18 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420