ಸುರಪುರ: ತಾಲೂಕಿನ ಮಾಚಗುಂಡಾಳ ಹೊರ ವಲಯದ ಚಿಗರಿಹಾಳ ಕ್ರಾಸ್ ಬಳಿಯಲ್ಲಿ ಮಂಗಳವಾರ ವಿದ್ಯೂತ್ ಶಾರ್ಟ್ ಸಕ್ರ್ಯೂಟ್ನಿಂದ ಮನೆ ಸುಟ್ಟು ಅಪಾರ ಹಾನಿಯುಂಟಾಗಿದ್ದ ಮಾನಪ್ಪ ಹೆಬ್ಬಾಳ ಮನೆಗೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನಮಪ್ಪ ನಾಯಕ (ತಾತಾ) ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿ, ಆಕಸ್ಮಿಕವಾಗಿ ವಿದ್ಯೂತ್ ತಗಲಿ ಮನೆ ಸುಟ್ಟಿದೆ,ಇದರಲ್ಲಿ ನಿಮ್ಮದೇನು ತಪ್ಪಿಲ್ಲ ಇದಕ್ಕೆ ತಾವೇನು ಚಿಂತಿಸಬೇಕಿಲ್ಲ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.ಮುಂಬರುವ ದಿನಗಳಲ್ಲಿ ನಿಮ್ಮ ಕುಟುಂಬಕ್ಕೆ ಸರಕಾರದಿಂದ ಮನೆಯನ್ನು ನಿರ್ಮಿಸಿ ಕೊಡುವಂತೆ ಕ್ರಮ ಕೈಗೊಳ್ಳಲು ತಾಲೂಕು ಆಡಳಿತಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.ಅಲ್ಲದೆ ನಿಮ್ಮ ದಾಖಲೆ ಪತ್ರಗಳು ಸುಟ್ಟಿರುವ ಬಗ್ಗೆ ಗೊತ್ತಾಗಿದ್ದು ಅವುಗಳನ್ನು ನೀಡುವಂತೆ ತಹಸೀಲ್ದಾರರಿಗೆ ತಿಳಿಸುವುದಾಗಿ ಭರವಸೆ ನೀಡಿದರು.
ನಂತರ ಸಂತ್ರಸ್ತರಿಗೆ 10 ಸಾವಿರ ರೂಪಾಯಿಗಳ ಧನ ಸಹಾಯ ಮಾಡಿದರು.ಈ ಸಂದರ್ಭದಲ್ಲಿ ಮುಖಂಡರಾದ ರಂಗನಗೌಡ ಪಾಟೀಲ್ ದೇವಿಕೇರಾ,ರಾಘವೇಂದ್ರ ಮಾಚಗುಂಡಾಳ,ಹರೀಶ ತ್ರಿವೇದಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…