ಬಿಸಿ ಬಿಸಿ ಸುದ್ದಿ

ನೂತನ 3 ವಿದ್ಯುತ್ ಮಾರ್ಗ ನಿರ್ಮಾಣ: ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ತಾಲೂಕಿನ ಅಳ್ಳೊಳ್ಳಿ ಶಾಖೆಯಿಂದ ವಿದ್ಯುತ್ ಸರಬರಾಜಿನಲ್ಲಿ ಉಂಟಾಗುತ್ತಿದ್ದ ತೊಂದರೆ ತಪ್ಪಸಿಲು ಜೆಸ್ಕಾಂ ಚಿತ್ತಾಪುರ ಉಪವಿಭಾಗದ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಪರಿಣಾಮ ಅಳ್ಳೊಳ್ಳಿ ಶಾಖೆಯ 3 ನೂತನ 11 ಕೆವಿ ಸಾಮರ್ಥ್ಯದ ವಿದ್ಯುತ್ ಮಾರ್ಗ ನಿರ್ಮಾಣ ಮಾಡಿ ವಿದ್ಯುತ್ ಸಮಸ್ಯೆ ಬಗೆಹರಿಸಲಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಅಳ್ಳೊಳ್ಳಿ ಗ್ರಾಮದ ಬಳಿ ನಿರ್ಮಿಸಿರುವ 33 ಕೆವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದಿಂದ ಸುಮಾರು 39 ಗ್ರಾಮಗಳು ಹಾಗೂ 19 ತಾಂಡಗಳ ವ್ಯಾಪ್ತಿಯಡಿಯಲ್ಲಿ ಸುಮಾರು 120 ಕಿಮಿ, ವರೆಗೆ ಒಂದೇ ಮಾರ್ಗವಿತ್ತು. ಹಾಗಾಗಿ, ಈ ಯಾವುದಾದರೂ ಒಂದು ಗ್ರಾಮದಲ್ಲಿ ವಿದ್ಯುತ್ ಸರಬರಾಜಿನಲ್ಲಿ ತೊಂದರೆಯಾದರೆ ಎಲ್ಲ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗುತ್ತಿತ್ತು. ಆದ್ದರಿಂದ ಈ ಮಾರ್ಗದಲ್ಲಿ 3 ನೂತನ ಎನ್ ಜಿ ವೈ ವಿದ್ಯುತ್ ಸರಬರಾಜು ಕೇಂದ್ರ ಸ್ಥಾಪಿಸುವ ಮೂಲಕ 24 ಗಂಟೆ ವಿದ್ಯುತ್ ಸರಬರಾಜಿಗೆ ಕ್ರಮ ಕೈಗೊಳ್ಳಲಾಗಿದ್ದು.

ಪ್ರಸ್ತುತ ಮೂರು ಹಳೆಯ ಮಾರ್ಗಗಳಾದ ಅಳ್ಳೊಳ್ಳಿ, ಯಾಗಾಪುರ ಹಾಗೂ ಲಾಡ್ಲಾಪುರ ವಿದ್ಯುತ್ ಸರಬರಾಜು ಕೇಂದ್ರಗಳ ಜೊತೆಗೆ ಮೂರು ಎನ್ ಜಿ ವೈ ಕೇಂದ್ರಗಳನ್ನು ಹಾಜಿ ಸರೋವರ, ದಂಡಗುಂಡ ಹಾಗೂ ರಾಮತೀರ್ಥ ಗ್ರಾಮಗಳಲ್ಲಿ ಸ್ಥಾಪಿಸಿ ಈ ಕೇಂದ್ರಗಳ ಅಡಿಯಲ್ಲಿ ಬರುವ ಗ್ರಾಮಗಳಿಗೆ ನಿರಂತರ 24 ಗಂಟೆ ವಿದ್ಯುತ್ ಸರಬರಾಜು ಮಾಡಲು ಹಾಗೂ ಪಂಪಸೆಟ್ ಗಳಿಗೆ 7 ತಾಸು ಮೂರು ಫೇಸ್ ವಿದ್ಯುತ ಸರಬರಾಜು ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕರು ಹೇಳಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago