ಚಿತ್ತಾಪುರ: ಕೊರೊನ್ ವೈರಸ್ ಹಿನ್ನೆಲೆ ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಎಚ್ಚರವಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸದಲ್ಲಿ ಪಾಲ್ಗೊಳ್ಳಿ ಎಂದು ತಾಲೂಕ ಪಂಚಾಯತ್ ಅಧ್ಯಕ್ಷ ಜಗದೇವ ರೆಡ್ಡಿ ಪೊಲೀಸ್ ಪಾಟೀಲ್ ಕೂಲಿಕಾರರಿಗೆ ಸೂಚಿಸಿದರು
ತಾಲೂಕಿನ ಸಾತನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ನರೇಗಾ ಯೋಜನೆ ಅಡಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಇಂತಹ ಸಂಕಷ್ಟ ಸಮಯದಲ್ಲಿ ಉದ್ಯೋಗಖಾತ್ರಿ ನಿಮಗೆ ಸಹಕಾರಿ ಆಗುತ್ತದೆ ಯಾವುದೇ ಕಾಲಕ್ಕೂ ಧೈರ್ಯಗೆಡದೆ ಕೆಲಸ ಮಾಡಿ ಸರ್ಕಾರ ನಿಮ್ಮ ನೆರವಿಗೆ ಇದೆ ಎಂದು ಹೇಳಿದರು
ತಾಲೂಕ್ ಪಂಚಾಯತ್ ಇಓ ಅನಿತಾ ಕೆ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆ ಅಡಿ ಪ್ರತಿಯೊಬ್ಬ ಕೂಲಿಕಾರ್ಮಿಕರಿಗೆ ದಿನಕ್ಕೆ ರೂಪಾಯಿ 275/- ಸಿಗುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು. ಇದರಿಂದ ತೃಪ್ತಿಯಾದ ಕೂಲಿಕಾರರು (ಕೋವಿಡ್-19) ಈ ಸಂಕಷ್ಟ ಸಮಯದಲ್ಲಿ ಉದ್ಯೋಗಖಾತ್ರಿ ಯೋಜನೆ ಅಡಿ ನೀಡುವ ಕೆಲಸವೇ ನಮಗೆ ಆಸರೆಯಾಗಿದೆ, ಎಂದು ಬಹುತೇಕ ಕೂಲಿಕಾರರು ಸಂತಸ ವ್ಯಕ್ತಪಡಿಸಿದರು.
ಈ ವೇಳೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ ಕರದಾಳ, ಗ್ರಾಮ ಪಂಚಾಯತ್ ಪಿಡಿಒ ಸೂರ್ಯಕಾಂತ್, ತಾಲೂಕ್ ಪಂಚಾಯತ್ ಮ್ಯಾನೇಜರ್ ಅಮೃತ, ಇದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…