ಹೈದರಾಬಾದ್ ಕರ್ನಾಟಕ

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಆರ್‍ಕೆಎಸ್ ವಿರೋಧ

ವಾಡಿ: ಎಪಿಎಂಸಿ ಕಾಯ್ದೆಗೆ ಎಪಿಎಲ್‍ಎಂ-2017 ಕಾಯ್ದೆಯ ಮೂಲಕ ತಿದ್ದುಪಡಿ ಮಾಡಿ ಅದನ್ನು ಸುಗ್ರೀವಾಜ್ಞೆ ಮೂಲಕ ಅನುಷ್ಟಾನಕ್ಕೆ ತರಲು ಮುಂದಾಗಿರುವ ಕೇಂದ್ರ ಸರಕಾರದ ಕ್ರಮವನ್ನು ರೈತ ಕೃಷಿ ಕಾರ್ಮಿಕ ಸಂಘಟನೆ (ಆರ್‍ಕೆಎಸ್) ಖಂಡಿಸಿದೆ.

ಈ ಕುರಿತು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಹಳಕರ್ಟಿ ಗ್ರಾಪಂ ಅಧಿಕಾರಿಗೆ ಸಲ್ಲಿಸಿರುವ ಆರ್‍ಕೆಎಸ್ ಸಂಚಾಲಕ ಶಿವುಕುಮಾರ ಆಂದೋಲಾ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೇಂದ್ರ ಬಿಜೆಪಿ ಸರಕಾರ, ಕೃಷಿ ಉತ್ಪನ್ನಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಮಡಿಲಿಗೆ ಹಾಕಿದೆ. ಜಾರಿಗೊಳಿಸಲಾಗಿರುವ ಕೊರೊನಾ ಲಾಕ್‍ಡೌನ್ ಬಡ ಮತ್ತು ಮಧ್ಯಮ ರೈತರು ಕೃಷಿ ಕಾರ್ಮಿಕರ ಜೀವನವನ್ನು ಸಂಕಟಮಯಗೊಳಿಸಿದೆ. ರೈತರ ಬದುಕನ್ನು ಹಸನು ಮಾಡಲು ಧಾವಿಸಬೇಕಾದ ಸರಕಾರ, ರೈತರ ಹಿತಾಸಕ್ತಿಯನ್ನು ಕಾರ್ಪೋರೇಟ್ ಕಂಪನಿಗಳ ಯಂತ್ರಗಳಡಿ ನಜ್ಜುಗುಜ್ಜಾಗುವಂತೆ ಮಾಡಲು ಈ ತಿದ್ದುಪಡಿಗಳನ್ನು ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ವಿರೋಧಿ ಸುಗ್ರೀವಾಜ್ಞೆಯನ್ನು ಕೂಡಲೇ ಹಿಂಪಡೆಯಬೇಕು. ಬಂಡವಾಳಿಗರ ಲಾಭಕ್ಕಾಗಿ ರೈತರನ್ನು ಬಲಿ ಕೊಡಲು ಮುಂದಾದರೆ, ಮುಂಬರುವ ದಿನಗಳಲ್ಲಿ ರಾಜ್ಯದಾಧ್ಯಂತ ರೈತರನ್ನು ಸಂಘಟಿಸುವ ಮೂಲಕ ಆರ್‍ಕೆಎಸ್ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.

ಜೀವನಾವಶ್ಯಕ ವಸ್ತುಗಳನ್ನು ಪಡೆಯಲು ಬಡ ಕುಟುಂಬಗಳಿಗೆ ಕನಿಷ್ಠ ರೂ.10 ಸಾವಿರ ನೀಡಬೇಕು. ರೈತರಿಗೆ ಅಗತ್ಯವಿರುವಷ್ಟು ಬಡ್ಡಿರಹಿತ ಸಾಲವನ್ನು ನೀಡಬೇಕು. ಬಡ ರೈತರಿಗೆ ವರ್ಷವಿಡೀ ಉದ್ಯೋಗ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ರೈತ ಮುಖಂಡರಾದ ಈರಣ್ಣ ಲೋಕನಳ್ಳಿ, ದೊಡ್ಡಪ್ಪ ಹೊಸ್ಸೂರ, ಅಯ್ಯಪ್ಪ ಹುಳಗೋಳ, ಚೌಡಪ್ಪ ಗಂಜಿ, ಭೀಮು ಮಾಟ್ನಳ್ಳಿ, ನಾಗರಾಜ ಇಸಬಾ, ಸಿದ್ದರಾಜ ಮದ್ರಿ, ದತ್ತಾತ್ರೇಯ ಹುಡೇಕರ, ಗೌತಮ ಪರತೂರಕರ, ಮಲ್ಲಿನಾಥ ಹುಂಡೇಕಲ್ ಇದ್ದರು.

emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…

31 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

14 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

16 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

16 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago