ಪಾಳಾ ಜನಕಲ್ಯಾಣ ಟ್ರಸ್ಟ್ : ‘ಬಸವ ಪುರಸ್ಕಾರ’ಕ್ಕೆ ಆಯ್ಕೆ

ಕಲಬುರಗಿ: ಶ್ರೀ ಸುಭಾಷಚಂದ್ರ ಪಾಟೀಲ ಸ್ಮಾರಕ ಜನ ಕಲ್ಯಾಣ ಟ್ರಸ್ಟ್ ಪಾಳಾ ವತಿಯಿಂದ ಕೊಡಮಾಡುವ ಎರಡನೇ ವರ್ಷದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಹಾಗೂ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ‘ಬಸವ ಪುರಸ್ಕಾರ’ಕ್ಕೆ ಲೇಖಕರನ್ನು ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಶರಣಗೌಡ ಪಾಟೀಲ ಪಾಳಾ ತಿಳಿಸಿದ್ದಾರೆ.

ರಾಷ್ಟ್ರೀಯ ಬಸವ ಪುರಸ್ಕಾರಕ್ಕೆ ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರೂ ಆಗಿರುವ ಹಿರಿಯ ವಿದ್ವಾಂಸರಾದ ಡಾ. ವಿ.ಜಿ.ಪೂಜಾರ ಅವರ ‘ಶಿವಶರಣರ ಸ್ವರ ವಚನ ಸಾಹಿತ್ಯ’ ಮತ್ತು ಕಾದಂಬರಿಕಾರ ಮದನ್ ಪಟೇಲ್ ಬೆಂಗಳೂರು ಅವರ ‘ಮಹಾಮಾಯೆ’ ಹಾಗೂ ಹಿರಿಯ ಲೇಖಕಿ ಡಾ.ಅಮೃತಾ ಕಟಕೆ ಅವರ ‘ಮಹಿಳಾ ಅಭಿವ್ಯಕ್ತಿ’ ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರವು ಒಂದೂವರೆ ತೊಲೆ ಬೆಳ್ಳಿ, ಸನ್ಮಾನ, ಗೌರವ ಪತ್ರ ಮತ್ತು ಮೊಮೆಂಟೋ ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯ ಮಟ್ಟದ ಬಸವ ಪುರಸ್ಕಾರಕ್ಕೆ ಮೂವರನ್ನು ಆಯ್ಕೆ ಮಾಡಲಾಗಿದ್ದು, ಹಿರಿಯ ಲೇಖಕರಾದ ಡಾ.ಕಲ್ಯಾಣರಾವ ಪಾಟೀಲ ಅವರ ‘ಡಾ.ಎಂ.ಎಂ.ಕಲಬುರಗಿ ಅವರ ಶೋಧಗಳು’ ಮತ್ತು ಬಾಗಲಕೋಟೆಯ ಬದರಿನಾಥ ಜಹಾಗೀರದಾರ ಅವರ ‘ಮೌನ ಮೆರವಣಿಗೆ’ ಹಾಗೂ ಶ್ರೀಮತಿ ದಾಕ್ಷಾಯಿಣಿಮಠ ಬಳಬಟ್ಟಿ ಅವರ ‘ಮಹಾಶರಣ’ ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರವು ಒಂದು ತೊಲೆ ಬೆಳ್ಳಿ, ಸನ್ಮಾನ, ಗೌರವ ಪತ್ರ ಮತ್ತು ಮೊಮೆಂಟೋ ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಬಸವ ಪುರಸ್ಕಾರಕ್ಕೆ ಐವರನ್ನು ಆಯ್ಕೆ ಮಾಡಲಾಗಿದ್ದು, ಡಾ.ಚಿ.ಸಿ.ನಿಂಗಣ್ಣ ಅವರ ‘ಕಡೆಗೀಲು ಬಂಡಿಗಾಧಾರ’, ಪ್ರೇಮಾ ಹೂಗಾರ ಅವರ ‘ಹಾಯ್ಕುಗಳು’, ಶರಣು ಅತನೂರ ಅವರ ‘ಒಡಲ ನೋವಿನ ಧ್ವನಿ’, ಮೋಹನ ಎಸ್.ಮರಗುತ್ತಿ ಅವರ ‘ಜನ್ಮಗ್ರಂಥ’ ಹಾಗೂ ನೀಲಮ್ಮ ಹಿರೇಮಠ ಅವರ ‘ಹೊಸದು’ ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರವು ಅರ್ಧ ತೊಲೆ ಬೆಳ್ಳಿ, ಸನ್ಮಾನ, ಗೌರವ ಪತ್ರ ಮತ್ತು ಮೊಮೆಂಟೋ ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

emedialine

View Comments

  • ಶರಣು ಶರಣಾರ್ಥಿ ಸರ್

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420