ಕಲಬುರಗಿ: ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಭಂದದ ಮಧ್ಯೆ ಮುಸ್ಲಿಂ ಬಾಂಧವರ ಪವಿತ್ರ ಈದ್ ಉಲ್ ಫಿತ್ರ್ ಸರಳ ರೀತಿಯಲ್ಲಿ ಮನೆಯಲ್ಲೇ ಇದ್ದು ವಿಶೇಷ ಪ್ರಾರ್ಥನೆ ಸಲ್ಲಿಸಿ ರಂಜಾನ್ ಹಬ್ಬ ಆಚರಿಸಿದರು.
” ಸಾಂಕ್ರಮಿಕ ರೋಗಗಳು ಇರುವೆಡೆಗೆ ನೀವು ಹೋಗಬೇಡಿ; ಸಾಂಕ್ರಮಿಕ ರೋಗಗಳ ಪ್ರದೇಶದಲ್ಲಿ ನೀವಿದ್ದರೆ ಮನೆಯಲ್ಲೇ ಇರಿ” ಕೊರೊನಾದಂತಹ ಸಾಂಕ್ರಮಿಕ ರೋಗಗಳ ಬಗ್ಗೆ ಪ್ರವಾದಿ ಮಹಮ್ಮದ್ ರು 1400 ವರ್ಷಗಳ ಹಿಂದೆಯೇ ಎಚ್ಚರಿಕೆ ಹೇಳಿದ್ದಾರೆ. ಅದರಂತೆ ನಾಡಿನಾದ್ಯಂತ ಮುಸ್ಲಿಂ ಬಾಂಧವರು ಇಂದು ರಂಜಾನ್ ಹಬ್ಬವನ್ನು ಅತ್ಯಂತ ಸರಳ ರೀತಿಯಲ್ಲಿ ಆಚರಿಸಿದರು.
ಹೊಸ ಬಟ್ಟೆ, ಉಡುಗೆ ತೊಡುಗೆಗಳಿಲ್ಲದೆ, ಸಾಮೂಹಿಕ ಪ್ರಾರ್ಥನೆ ಸಲ್ಲಿಸದೆ ಎಲ್ಲರೂ ತಮ್ಮ ತಮ್ಮ ಮನೆಯಲ್ಲಿ ವಿಶೇಷ ಆಹಾರ ಪದಾರ್ಥಗಳನ್ನು ತಯಾರಿಸಿ ಮನೆಯವರ ಜೊತೆ ಆಚರಿಸಿದರು. ಪರಸ್ಪರ ಹಸ್ತಲಾಘವ, ಅಪ್ಪುಗೆ ಇಲ್ಲದೆ ಎಲ್ಲರೂ ಶುಭ್ರವಾದ ಬಟ್ಟೆ ಧರಿಸಿ ಪರಸ್ಪರ ಶುಭಾಶಯ ಹೇಳಿ ಸಂಭ್ರಮಿಸಿದರು.
ಕಲಬುರಗಿಯ ಈದ್ಗಾ ಮೈದಾನ ಸಾಮೂಹಿಕ ಪ್ರಾರ್ಥನೆ ಇಲ್ಲದೆ ಬಿಕೋ ಎನ್ನುತ್ತಿತ್ತು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸೂಕ್ತ ಬಿಗಿ ಬಂದೋಬಸ್ತ್ ಒದಗಿಸಿದ್ದರು. ಯಾರೊಬ್ಬರೂ ಈ ಕಡೆ ಸುಳಿಯದಂತೆ ಕಂಡುಬಂದಿತು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…