ಸುರಪುರ: ಸೊಮವಾರ ರಾತ್ರಿ ಸುರಿದ ಅಕಾಲಿಕ ಮಳೆ ಗಾಳಿಗೆ ನಗರದ ಹಸನಾಪುರ ಬಳಿಯ ರಾಜಾ ಕುಮಾರ ನಾಯಕ ಕಾಲೋನಿಯಲ್ಲಿನ ಮನೆಗಳ ಚಾವಣಿಯ ತಗಡುಗಳು ಹಾರಿಹೋಗಿ ಅಪಾರ ಪ್ರಮಾಣದ ನಷ್ಟವುಂಟಾಗಿರುವ ಘಟನೆ ನಡೆದಿದೆ.
ಶಾಂತಮ್ಮ ರಾಮಣ್ಣ ಮ್ಯಾಕಲ್ ಹಾಗು ಆಶಪ್ಪ ಯಾದವ್ ಎಂಬುವವರ ಮನೆಗಳ ಚಾವಣಿಯ ತಗಡುಗಳು ಹಾರಿ ಹೋಗಿದ್ದರಿಂದ ಮನೆಯಲ್ಲಿದ್ದ ಟಿವಿ ಕಂಪ್ಯೂಟರ್ ಹಾಗು ಇತರೆ ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಧವಸ ದಾನ್ಯಗಳು ಹಾಗು ಬಟ್ಟೆ ಬರೆಗಳು ಸೇರಿದಂತೆ ಲಕ್ಷಾಂತರ ರೂಪಾಯಿಗಳ ವಸ್ತುಗಳು ನಾಶವಾಗಿವೆ.
ಶಾಂತಮ್ಮ ಮ್ಯಾಕಲ್ ಅವರ ಮನೆಯಲ್ಲಿ ಕಂಪ್ಯೂಟರ್ ರಿಪೇರಿ ಕೆಲಸ ಮಾಡುತ್ತಿರುವುದರಿಂದ ಅನೇಕರು ರಿಪೇರಿಗೆಂದು ತಂದಿದ್ದ ಕಂಪ್ಯೂಟರ್ ಲ್ಯಾಪಟಾಪ್ ವಸ್ತುಗಳು ಮಳೆಯ ನೀರಿಂದ ಹಾನಿಯಾಗಿವೆ ಎಂದು ಮಂಜುನಾಥ ಮ್ಯಾಕಲ್ ತಮ್ಮ ನೋವು ತೋಡಿಕೊಂಡಿದ್ದಾರೆ.
ಲಕ್ಷಾಂತರ ರೂಪಾಯಿ ನಷ್ಟವುಂಟಾಗಿದ್ದರಿಂದ ಬಡವರಾದ ನಾವು ಏನು ಮಾಡುವುದೆಂದು ತೋಚದಾಗಿದೆ.ಸರಕಾರ ನಮ್ಮ ನೆರವಿಗೆ ಬರಬೇಕೆಂದು ವಿನಂತಿಸಿದ್ದಾರೆ.ಹಾನಿಗೀಡಾದ ಮನೆಗಳಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ನಷ್ಟದ ಕುರಿತು ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…