ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ತೆರವುಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ – ದೇವಿಂದ್ರಪ್ಪ ತೋಟಿಗೇರ ಆಗ್ರಹ.

0
69

ಶಹಾಪುರ (ಗ್ರಾ) : ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿ ನಿರ್ಮಿಸಿದ್ದ ವೀರರಾಣಿ ಕಿತ್ತೂರ ಚನ್ನಮ್ಮಾಜಿಯ ವೃತ್ತವನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ತೆರವುಗೊಳಿಸಿ ಅವಮಾನ ಮಾಡಿದ್ದಾರೆ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಶಹಾಪುರ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ದೇವಿಂದ್ರಪ್ಪ ತೋಟಗೇರ ಆಗ್ರಹಿಸಿದ್ದಾರೆ.

ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾಭಿಮಾನದ ಕಿಚ್ಚನ್ನು ಹೊತ್ತಿಸಿದ ವೀರವನಿತೆ ಕಿತ್ತೂರುರಾಣಿ ಚನ್ನಮ್ಮಾಜಿಯ ವೃತ್ತವನ್ನು ಸಿಂಧಗಿಯಲ್ಲಿ ನಿನ್ನೆ ರಾತ್ರೋರಾತ್ರಿ ತೆರವುಗೊಳಿಸಿರುವುದು ತುಂಬಾ ನೋವನ್ನುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Contact Your\'s Advertisement; 9902492681

ವೃತ್ತವನ್ನು ತೆರವುಗೊಳಿಸಿದ ಕಿಡಿಗೇಡಿಗಳು ಯಾರೇ ಆಗಿರಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಈ ಮೂಲಕ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದವರಾದ ಮಲ್ಲಿಕಾರ್ಜುನ ಆವಂಟಿ,ಹೊನ್ನಪ್ಪ ಸಾಹು ಹೊಸುರು, ರಮೇಶ್ ಹೊಸೂರು,ಮಲ್ಲಿಕಾರ್ಜುನ್ ಕೊಳ್ಳೂರ,ಶರಣು ಬೇವಿನಹಳ್ಳಿ, ಅಶೋಕ್ ದಿಗ್ಗಿ,ಶಂಕರ್ ಕಡಗುಡ ಆಗ್ರಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here