ವೀಲಿಂ ಯುವ ವೇದಿಕೆ ರಾಜ್ಯ ಸಂಚಾಲಕರಾಗಿ ಚಂದ್ರಶೇಖರ ಡೊಣೂರ ನೇಮಕ

0
62

ಸುರಪುರ: ವೀರಶೈವ ಲಿಂಗಾಯತ ಯುವ ವೇದಿಕೆಯ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಿದ್ದು,ವೇದಿಕೆಯ ರಾಜ್ಯ ಸಂಚಾಲಕರನ್ನಾಗಿ ಚಂದ್ರಶೇಖರ ಡೊಣೂರ ಅವರನ್ನು ನೇಮಕಗೊಳಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಪ್ರಶಾಂತ ಕಲ್ಲೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು,ಕಳೆದ ಅನೇಕ ವರ್ಷಗಳಿಂದ ಸುರಪುರ ತಾಲೂಕಿನಲ್ಲಿಯ ವೀರಶೈವ ಲಿಂಗಾಯತ ಯುವ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಸಮುದಾಯಕ್ಕೆ ತಾವು ಸಲ್ಲಿಸಿದ ಸೇವೆಯನ್ನು ಮನಗಂಡು ಈಗ ರಾಜ್ಯ ಸಂಚಾಲಕರನ್ನಾಗಿ ನೇಮಕಗೊಳಿಸಲಾಗಿದೆ.

Contact Your\'s Advertisement; 9902492681

ಸಂಘಟನೆಯ ನೀತಿ ನಿಯಮಗಳಿಗೆ ಬದ್ಧರಾಗಿ,ತತ್ವ ಸಿದ್ಧಾಂತಗಳಿಗೆ ಧಕ್ಕೆ ಬಾರದಂತೆ ವೀರಶೈವ ಲಿಂಗಾಯತ ಯುವ ವೇದಿಕೆಯನ್ನು ಕಟ್ಟಿ ಬೆಳೆಸುವಂತೆ ಹಾಗು ಯಾವುದೇ ವೇದಿಕೆಯ ಕಾರ್ಯ ಚಟುವಟಿಕೆಗಳನ್ನು ನಡೆಸುವ ಮುನ್ನ ರಾಜ್ಯಾಧ್ಯಕ್ಷರ ಗಮನಕ್ಕೆ ತಂದು ಸಮಾಜದ ಏಳಿಗೆಗೆ ಶ್ರಮಿಸುವಂತೆ ತಿಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here