ಕಲಬುರಗಿ: ಅಂತರ್ ರಾಜ್ಯ ಜಿಂಕೆ ಬೇಟೆಗಾರರ ಶಾರ್ಪ್ ಶೂಟರ್ ಸೇರಿ ಐವರ ಬಂಧನ ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಲಬುರಗಿಯ ಮಹಮ್ಮದ್ ಶಾಕೀರ್, ಮಹಮ್ಮದ್ ಅಬ್ದುಲ್ ವಾಹಬ್, ಮಹಮ್ಮದ್ ನಿಜಾಜ್, ಹೈದರಾಬಾದಿನ ಮಹಮ್ಮದ್ ಮುಕ್ರಂ ಹಾಗೂ ಮಹಮ್ಮದ್ ಮುನೀರ್ ಬಂಧಿತ ಆರೋಪಿಗಳು, ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆ ನಾಗಲಗೀತ ಮಂಡಲ ಗ್ರಾಮದಲ್ಲಿ ಜಿಂಕೆ ಬೇಟಿಗಾಗಿ, ಹೈಫೈ ಕಾರಿನಲ್ಲಿ ಬಂದು ಜಿಂಕೆ ಬೇಟೆಯಾಡಿ ಮಾಂಸ ಚರ್ಮ ಸಾಗಿಸುತ್ತಿದ್ದ ಖದೀಮರು ಎನ್ನಲಾಗಿದೆ.
ಬಂಧಿತ ಆರೋಪಿಗಳಿಂದ ಬೇಟೆಗೆ ಬಳಸಿದ ಸ್ಕಾರ್ಪಿಯೋ ವಾಹನ, 30.60 ಸ್ಪೋರ್ಟ್ಸ್ ರೈಫಲ್, 12 ಜೀವಂತ ಗುಂಡು, 4 ಚಾಕು, ಜಿಂಕೆ ಮಾಂಸ, ಚರ್ಮವನ್ನು ನಾರಾಯಣಖೇಡ್ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ಮಹಮ್ಮದ್ ಶಾಕೀರ್ ಕಲಬುರಗಿಯ ಶಾರ್ಪ್ ಶೂಟರ್, ರೈಫಲ್ ಅಸೋಸಿಯೇಷನ್ ಸ್ಪೋರ್ಟ್ ಮೆಂಬರ್ ಆಗಿದ್ದಾದ್ದು, ಸ್ಪೋರ್ಟ್ಸ್ ಗಾಗಿ 30.60 ರೈಫಲ್ ಲೈಸೆನ್ಸ್ ಪಡೆದು ಬೇಟೆಗೆ ಬಳಸಿದ ಆರೋಪ ಎದುರಿಸುತ್ತಿದ್ದಾರೆ.
ಈ ಕುರಿತು ಸಂಗಾರೆಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…