ಬಿಜೆಪಿಯಿಂದ ಮನೆ ಮನೆ ಸಂಪರ್ಕ ಅಭಿಯಾನ

0
32

ಶಹಾಪುರ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಭಾರತೀಯ ಜನತಾ ಪಕ್ಷದ ಎರಡನೇ ಅವಧಿಯ ಮೊದಲ ವರ್ಷದ ಸಾಧನೆಯ ಕುರಿತು ತಾಲ್ಲೂಕಿನ ಹುಲಕಲ್ ಗ್ರಾಮದಲ್ಲಿ ಮನೆ ಮನೆಗೆ ಸಂಪರ್ಕ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡು ಸರಕಾರದ ಕಾರ್ಯವೈಖರಿಗಳ ಜೊತೆಗೆ ಕರಪತ್ರಗಳನ್ನು ಬಿಜೆಪಿ ಗ್ರಾಮ ಮಂಡಲ ಅಧ್ಯಕ್ಷರಾದ ರಾಜುಗೌಡ ಉಕ್ಕಿನಾಳ ಜನರಿಗೆ ಹಂಚಿದರು.

Contact Your\'s Advertisement; 9902492681

ಕೇಂದ್ರ ಹಾಗೂ ರಾಜ್ಯ ಸರಕಾರದ ಜಾರಿಗೆ ತಂದಿರುವ ಪ್ರತಿಯೊಂದು ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ಸಿಗುವಂತೆ ಮಾಡಿದ್ದು ನರೇಂದ್ರ ಮೋದಿಯವರೇ ಎಂದು ಈ ಸಂದರ್ಭದಲ್ಲಿ ಹೇಳಿದರು.ಮೋದಿಜಿಯವರು ಬಡವರಿಗೆ,ದೀನ ದಲಿತರಿಗೆ ಹಲವಾರು ಯೋಜನೆಗಳು ತಂದಿದ್ದಾರೆ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇಂದಿನಿಂದ ಆರಂಭಗೊಂಡ ಈ ಅಭಿಯಾನವು ಇದೇ ತಿಂಗಳು 15 ರವರೆಗೂ ಜಾರಿಯಲ್ಲಿರುತ್ತದೆ, ಈ ಕಾರ್ಯಕ್ರಮಗಳಲ್ಲಿ ಶಾಸಕರು, ಸಂಸದರು,ಬಿಜೆಪಿಯ ಪದಾಧಿಕಾರಿಗಳು ಕಾರ್ಯಕರ್ತರು ಇದರಲ್ಲಿ ಭಾಗವಹಿಸಿ ನರೇಂದ್ರ ಮೋದಿಯವರು ಬರೆದಿರುವ ಪತ್ರವನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತಾರೆ ಎಂದು ಹೇಳಿದರು ಈ ಸಂದರ್ಭದಲ್ಲಿ ಭೀಮರೆಡ್ಡಿ ಹುಲಿಕಲ್, ಶಾಂತಗೌಡ ದಿಗ್ಗಿ, ಯಲ್ಲಪ್ಪ ನಾಯಕ್, ಭೀಮಣ್ಣ ಜೊತೆಗೆ ಪಕ್ಷದ ಕಾರ್ಯಕರ್ತರು ಹಾಗೂ ಇತರರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here