ಬಿಸಿ ಬಿಸಿ ಸುದ್ದಿ

ಮುಸುಕಿನ ಜೋಳ ಬೆಳೆದು ಸಂಕಷ್ಟಕ್ಕೀಡಾದ ರೈತರಿಗೆ ಆರ್ಥಿಕ ನೆರವು

ಕಲಬುರಗಿ: ಕೋವಿಡ-19 ಲಾಕ್‍ಡೌನ್ ಸಮಸ್ಯೆಯಿಂದ 2019-20ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದು ಸಂಕಷ್ಟಕ್ಕಿಡಾದ ಪ್ರತಿ ರೈತರಿಗೆ 5000 ರೂ. ಗಳ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಇ-ಆಡಳಿತದಿಂದ 2019-20ನೇ ಸಾಲಿನಲ್ಲಿ ಕೈಗೊಳ್ಳಲಾದ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲಾಗಿರುವ ಬೆಳೆ ವಿವರಗಳ ಆಧಾರದ ಮೇರೆಗೆ ಪಾವತಿಸಲಾಗುತ್ತದೆ. ಈ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲಾಗಿರುವ ಮುಸುಕಿನ ಜೋಳದ ಬೆಳೆಗಾರರ ವಿವರವನ್ನು ಪಡೆಯಲು ರೈತರು ಸಂಬಂಧಪಟ್ಟ ಆಯಾ ತಾಲೂಕಿನ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕಾ ಕಚೇರಿಗಳಿಗೆ ಸಂಪರ್ಕಿಸಬೇಕು. ತಮ್ಮ ಹೆಸರು ದಾಖಲಾಗದೇ ಇದ್ದಲ್ಲಿ ಮುಸುಕಿನ ಜೋಳ ಬೆಳೆಗಾರರಾಗಿದ್ದಲ್ಲಿ ಅಂತಹ ರೈತರು ದಾಖಲಾತಿಗಳೊಂದಿಗೆ 2020ರ ಜೂನ್ 23 ರೊಳಗಾಗಿ ತಮ್ಮ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.

ಫಲಾನುಭವಿಗಳ ಅರ್ಹತೆ ಇಂತಿದೆ. ಫಲಾನುಭವಿಗಳು ರೈತರಾಗಿದ್ದು, ಜಮೀನು ಅವರ ಹೆಸರಿನಲ್ಲಿರಬೇಕು. ಆಧಾರ ಕಾರ್ಡ ಜಿರಾಕ್ಸ್ ಹಾಗೂ ರೈತರ ಬ್ಯಾಕ್ ಖಾತೆ ಪಾಸ್ ಪುಸ್ತಕದ ಜಿರಾಕ್ಸ ಪ್ರತಿಯನ್ನು ಸಲ್ಲಿಸಬೇಕು. ಜಂಟಿ ಖಾತೆಯಲ್ಲಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪಡೆಯಬೇಕು (ನೋಟರಿರವರಿಂದ ಧೃಢೀಕರಣ ಮಾಡಿಸಬೇಕು), ಮುಸುಕಿನ ಜೋಳ ಬೆಳೆದ ಪ್ರತಿ ರೈತರು ಒಂದು ಹಂಗಾಮಿಗೆ ಅನ್ವಯವಾಗುವಂತೆ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

ತಂದೆ ಅಥವಾ ತಾಯಿಯ ಹೆಸರಿನಲ್ಲಿ ಜಮೀನಿದ್ದು ಅವರು ಮರಣ ಹೊಂದಿದ್ದರೆ ಮಾತ್ರ ಗ್ರಾಮ ಲೆಕ್ಕಾಧಿಕಾರಿಗಳಿಂದ ದೃಢೀಕರಿಸಿ ಕುಟುಂಬದ ಇತರೆ ಸದಸ್ಯರಿಂದ ಒಪ್ಪಿಗೆ ಪಡೆದು ತಮ್ಮ ಹೆಸರಿನಲ್ಲಿ ಅರ್ಜಿ ಸಲ್ಲಿಸುವುದು. ಮಹಿಳೆಯ ಹೆಸರಿನಲ್ಲಿ ಖಾತೆ ಹೊಂದಿದ್ದು, ಕುಟುಂಬದ ಇತರೆ ಪುರುಷ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ಯಾವುದೇ ಕಾರಣಕ್ಕೂ ಅರ್ಜಿ ಮಾನ್ಯ ಮಾಡಲಾಗುವುದಿಲ್ಲ. ಆದ್ದರಿಂದ ಮಹಿಳೆಯರ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಬೇಕು.

ಅದೇ ರೀತಿ 2019-20 ನೇ ಸಾಲಿನ ಮುಂಗಾರಿನಲ್ಲಿ ಪ್ರವಾಹದಿಂದ ಜಿಲ್ಲೆಯಲ್ಲಿ ಮುಸುಕಿನ ಜೋಳ ಹಾನಿಗೊಂಡ ರೈತರಿಗೆ ಎನ್.ಡಿ.ಆರ್.ಎಫ್./ ಎಸ್.ಡಿ.ಆರ್.ಎಫ್. ((NDRF/SDRF) ಮಾರ್ಗಸೂಚಿಯನ್ವಯ ಈಗಾಗಲೇ ಪರಿಹಾರ ನೀಡಲಾಗಿದೆ. ಪರಿಹಾರ ಪಡೆದ ರೈತರು ಅನರ್ಹರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

17 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

20 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

23 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago