ಕಲಬುರಗಿ: ಕೆಲವು ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಇನ್ನಿತರ ಅಧಿಕಾರಿ ಮತ್ತು ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದು ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರ ಸರ್ಕಾರಿ ಸೇವೆಗಳನ್ನು ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಜಿಲ್ಲೆಯಲ್ಲಿ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ ಸೇರಿದಂತೆ ಮತ್ತಿತರ ಅಧಿಕಾರಿ ಹಾಗೂ ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ 2020ರ ಜೂನ್ 10 ರಿಂದ ಒಂದು ತಿಂಗಳೊಳಗಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೆ ಕೂಡಲೇ ಹಿಂತಿರುಗಿಸಿ ರದ್ದುಪಡಿಸಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
.
ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ/ನೌಕರ ಅಥವಾ ಆತನ/ಆಕೆಯ ಅವಲಂಬಿತ ಕುಟುಂಬ ಸದಸ್ಯರು ಈಗಾಗಲೇ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಹೊಂದಿದ್ದಲ್ಲಿ ಒಂದು ತಿಂಗಳೊಳಗಾಗಿ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಒಂದು ತಿಂಗಳೊಳಗಾಗಿ ಹಿಂದಿರುಗಿಸಬೇಕೆಂದು ಸರ್ಕಾರವು ದಿನಾಂಕ: 10-06-2020 ರಂದು ಸುತ್ತೋಲೆ ಹೊರಡಿಸಿದೆ. ಒಂದು ವೇಳೆ, ಒಂದು ತಿಂಗಳ ನಂತರವೂ ಈ ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ/ದೂರುಗಳು ಸ್ವೀಕೃತವಾಗಿದ್ದಲ್ಲಿ ಅಂತಹ ಅಧಿಕಾರಿ/ನೌಕರರ ವಿರುದ್ದ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ. ಇದಲ್ಲದೇ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಸಹ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ ಹಾಗೂ ಒಬ್ಬ ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆಯಾಗಿದೆ. ಸರ್ಕಾರಿ ಅಧಿಕಾರಿ/ ನೌಕರ ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನ ರೇಖೆಗಿಂತ ಕೆಳಗೆ ಬರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…