ಟೈಲರ್ ಮಂಜಿಲ್‌ನಲ್ಲಿ ಕರ್ನಾಟಕ ಕಾರ್ಮಿಕರ ಹಿತರಕ್ಷಣಾ ಸಂಘದ ಸಭೆ

0
51

ಸುರಪುರ: ನಗರದ ಟೈಲರ್ ಮಂಜಿಲ್‌ನಲ್ಲಿ ಕರ್ನಾಟಕ ಕಾರ್ಮಿಕರ ಹಿತ ರಕ್ಷಣಾ ಸಂಘದ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ದೇವೆಂದ್ರ ತಳವಾರ ಭಾಗವಹಿಸಿ ಮಾತನಾಡಿ,ಇಂದು ರಾಜ್ಯದಲ್ಲಿ ಕಾರ್ಮಿಕರ ಸಮಸ್ಯೆಗಳು ತಾಂಡವವಾಡುತ್ತಿವೆ.ಸರಕಾರಗಳು ಕಾರ್ಮಿಕರ ಸಮಸ್ಯೆಗಳನ್ನು ನಿರ್ಲಕ್ಷಿಸಿವೆ,ಇದರಿಂದ ಇಂದು ಕಾರ್ಮಿಕರು ಒಂದೊತ್ತಿನ ಊಟಕ್ಕೂ ಸಂಕಟ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.ಕಾರ್ಮಿಕರ ಹಕ್ಕುಗಳನ್ನು ಪಡೆದುಕೊಳ್ಳಲು ಎಲ್ಲಾ ಕಾರ್ಮಿಕರಲ್ಲಿ ಒಗ್ಗಟ್ಟು ಹಾಗು ಹೋರಾಟದ ಅವಶ್ಯವಿದೆ ಎಂದರು.

Contact Your\'s Advertisement; 9902492681

ಇಂದು ನಮ್ಮ ಸಂಘಟನೆ ಬಲ ಪಡಿಸುವ ಉದ್ದೇಶದಿಂದ ನಾಡಿನೆಲ್ಲೆಡೆ ಸಂಚರಿಸಿ ಸಂಘಟನೆ ಕಟ್ಟಲಾಗುತ್ತಿದೆ. ಅದರಂತೆ ಸುರಪುರ ತಾಲೂಕಿನಲ್ಲಿಯೂ ಎಲ್ಲಾ ಕಾರ್ಮಿಕರನ್ನು ಸಂಘಟನೆಯಡಿ ಬರಮಾಡಿಕೊಂಡು ಉತ್ತಮವಾದ ಸಂಘಟನೆ ಕಟ್ಟಿ ಬಲ ಪಡಿಸುವಂತೆ ಕಿವಿಮಾತು ಹೇಳಿದರು.ಇದೇ ಸಂದರ್ಭದಲ್ಲಿ ಸಂಘದ ತಾಲೂಕು ಸಂ ಕಾರ್ಯದರ್ಶಿಯನ್ನಾಗಿ ಮಹಾದೇವ ಬೊನ್ಹಾಳ ಅವರನ್ನು ನೇಮಕಗೊಳಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಬಾಗೇಶ ಏವೂರ,ಆನಂದ ಹೊಸಗೌಡರ್,ಪ್ರಶಾಂತ ಜೈನಾಪುರ,ಶರಣು ದೇವರಮನಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here