ಸುರಪುರ: ನಗರದ ಟೈಲರ್ ಮಂಜಿಲ್ನಲ್ಲಿ ಕರ್ನಾಟಕ ಕಾರ್ಮಿಕರ ಹಿತ ರಕ್ಷಣಾ ಸಂಘದ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ದೇವೆಂದ್ರ ತಳವಾರ ಭಾಗವಹಿಸಿ ಮಾತನಾಡಿ,ಇಂದು ರಾಜ್ಯದಲ್ಲಿ ಕಾರ್ಮಿಕರ ಸಮಸ್ಯೆಗಳು ತಾಂಡವವಾಡುತ್ತಿವೆ.ಸರಕಾರಗಳು ಕಾರ್ಮಿಕರ ಸಮಸ್ಯೆಗಳನ್ನು ನಿರ್ಲಕ್ಷಿಸಿವೆ,ಇದರಿಂದ ಇಂದು ಕಾರ್ಮಿಕರು ಒಂದೊತ್ತಿನ ಊಟಕ್ಕೂ ಸಂಕಟ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.ಕಾರ್ಮಿಕರ ಹಕ್ಕುಗಳನ್ನು ಪಡೆದುಕೊಳ್ಳಲು ಎಲ್ಲಾ ಕಾರ್ಮಿಕರಲ್ಲಿ ಒಗ್ಗಟ್ಟು ಹಾಗು ಹೋರಾಟದ ಅವಶ್ಯವಿದೆ ಎಂದರು.
ಇಂದು ನಮ್ಮ ಸಂಘಟನೆ ಬಲ ಪಡಿಸುವ ಉದ್ದೇಶದಿಂದ ನಾಡಿನೆಲ್ಲೆಡೆ ಸಂಚರಿಸಿ ಸಂಘಟನೆ ಕಟ್ಟಲಾಗುತ್ತಿದೆ. ಅದರಂತೆ ಸುರಪುರ ತಾಲೂಕಿನಲ್ಲಿಯೂ ಎಲ್ಲಾ ಕಾರ್ಮಿಕರನ್ನು ಸಂಘಟನೆಯಡಿ ಬರಮಾಡಿಕೊಂಡು ಉತ್ತಮವಾದ ಸಂಘಟನೆ ಕಟ್ಟಿ ಬಲ ಪಡಿಸುವಂತೆ ಕಿವಿಮಾತು ಹೇಳಿದರು.ಇದೇ ಸಂದರ್ಭದಲ್ಲಿ ಸಂಘದ ತಾಲೂಕು ಸಂ ಕಾರ್ಯದರ್ಶಿಯನ್ನಾಗಿ ಮಹಾದೇವ ಬೊನ್ಹಾಳ ಅವರನ್ನು ನೇಮಕಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಬಾಗೇಶ ಏವೂರ,ಆನಂದ ಹೊಸಗೌಡರ್,ಪ್ರಶಾಂತ ಜೈನಾಪುರ,ಶರಣು ದೇವರಮನಿ ಸೇರಿದಂತೆ ಅನೇಕರಿದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…