ಬಾಬುರಾವ ಚಿಂಚನಸೂರಗೆ ವಿಧಾನ ಪರಿಷತ್ ಸದಸ್ಯರಾಗಿ ನೇಮಕ್ಕೆ ಆಗ್ರಹ

0
248

ಶಹಾಬಾದ: ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಕಮಲ ಅರಳಲು ಮಾಜಿ ಸಚಿವ ಬಾಬುರಾವ ಚಿಂಚನಸೂರ್ ಅವರ ಶ್ರಮ ಸಾಕಷ್ಟಿದೆ. ಆದ್ದರಿಂದ ಪಕ್ಷಕ್ಕೆ ಮತ್ತಷ್ಟು ಬಲ ತುಂಬಲು ಬಾಬುರಾವ ಚಿಂಚನಸೂರ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಿಸಬೇಕೆಂದು ನಗರ ಹಾಗೂ ಗ್ರಾಮೀಣ ಕೋಲಿ ಸಮಾಜದ ಅಧ್ಯಕ್ಷ ಶಿವಕುಮಾರ ತಳವಾರ ಒತ್ತಾಯಿಸಿದ್ದಾರೆ.

Contact Your\'s Advertisement; 9902492681

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಅವರು ಕಲ್ಯಾಣ ಕರ್ನಾಟಕ ಭಾಗದ ಜನಪರವಾದ ರಾಜಕಾರಣಿಯಾದ ಚಿಂಚನಸೂರ್ ಅವರು ಈಗಾಗಲೇ ಹತ್ತು ಹಲವು ಖಾತೆಯ ಸಚಿವರಾಗಿ ಕೆಲಸ ಮಾಡಿದ ಅನುಭವವಿದೆ.ಅಲ್ಲದೇ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡು ಲೋಕಸಭೆ ಚುನಾವಣೆಯಲ್ಲಿ ಡಾ.ಉಮೇಶ ಜಾಧವ ಅವರ ಗೆಲುವಿಗೆ ಮುಖ್ಯ ಪಾತ್ರವಹಿಸಿದ್ದಾರೆ. ಪಕ್ಷದ ಕಾರ್ಯಕರ್ತರ ಶಕ್ತಿಯಾಗಿರುವ ಚಿಂಚನಸೂರ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಿಸಬೇಕೆಂದು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here