ಕಲಬುರಗಿ: ಈ ಊರಲ್ಲಿ ಕಾಲಿಡುವುದೇ ತಡ, ಖಾಲಿ ಕೊಡಗಳ ರುದ್ರ ತಾಂಡವ, ಜನಗಳ ಹಾರಾಟ, ಚೀರಾಟದ ನರ್ತನಗಳದ್ದೇ ಕಾರುಬಾರು!
ಅಂದಂತೆ ಈ ಊರಿನ ಸಾರ್ವಜನಿಕರು ಇತ್ತೀಚಿಗೆ ಬೆಳಗ್ಗೆ ಎದ್ದಕೂಡಲೇ ನೀರಿಗಾಗಿ ಕೊಡ ತೆಗೆದುಕೊಂಡು ಕುಡಿವ ನೀರಿಗಾಗಿ ಅಂಡಲೆಯುವ ಪರಿಸ್ಥಿತಿ ಉಂಟಾಗಿದೆ.
ಜಿಲ್ಲಾ ಕೇಂದ್ರದಿಂದ ಕೇವಲ 40 ಕಿ.ಮೀ. ದೂರ ಇರುವ ಈ ಗ್ರಾಮಕ್ಕೆ ಕಳೆದ ಒಂದು ತಿಂಗಳಿಂದ ನೀರಿನ ಅಭಾವ ಉಂಟಾಗಿದೆ.
ಹೌದು ಇದು ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದ ಕುಡಿವ ನೀರಿನ ಕಥೆ. 1200 ಜನಸಂಖ್ಯೆ ಇರುವ ಈ ಗ್ರಾಮಕ್ಕೆ ಗ್ರಾಪಂ ವತಿಯಿಂದ ಈ ಮುಂಚೆ 5 ದಿನಕ್ಕೊಮ್ಮೆ ನಳದ ನೀರು ಪೂರೈಸಲಾಗುತ್ತಿತ್ತು. ಆದರೆ ಇದೀಗ 2-3 ಕೊಡ ಮಾತ್ರ ಬರುತ್ತಿವೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.
ಕುಡಿಯುವ ನೀರು ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಹೀಗಾಗಿ ಪ್ರತಿಯೊಂದು ಕುಟುಂಬದಿಂದ ಇಬ್ಬರು ನೀರು ತರಲು ನಿತ್ಯ ಬಿಸಿಲಲ್ಲಿ ಬಾವಿ, ಬಾವಿ ತಿರುಗಾಡುವಂತಾಗಿದೆ.
ಜಿಪಂ ಸಿಇಒ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೊಟ್ಟಿರುವ ಸಂಖ್ಯೆಗಳಿಗೆ ಫೋನ್ ಮಾಡಿದರೆ ಫೋನ್ ಸ್ವೀಕರಿಸುವವರು ಕೇವಲ ದೂರು ಸ್ವೀಕರಿಸುತ್ತಾರೆ ಮಾತ್ರ.
ಪಿಡಿಒ ಅವರನ್ನು ಕೇಳಿದರೆ ನೋಡೋಣ, ಮಾಡೋಣ ಎಂದು ಹೇಳುತ್ತಿದ್ದಾರೆ ವಿನಃ ಯಾರೊಬ್ಬರೂ ನೀರಿನ ವ್ಯವಸ್ಥೆ ಕಲ್ಪಿಸುತ್ತಿಲ್ಲ. ಇದು ಕೇವಲ ಮಾಡ್ಯಾಳ ಗ್ರಾಮದ ಕಥೆ ಮಾತ್ರ ಆಗಿರದೆ ಜಿಲ್ಲೆಯ ಬಹುತೇಕ ಗ್ರಾಮಗಳ ಕಥೆಯಾಗಿದೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…