ಶಹಾಪುರ: ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯ

0
72

ಶಹಾಪುರ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ನಿನ್ನೆ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಕರ್ಕಿಹಳ್ಳಿ ಗ್ರಾಮವೊಂದರಲ್ಲಿ ಜರುಗಿದೆ.

ಕರ್ಕಿಹಳ್ಳಿ ಗ್ರಾಮದ ಮೂಲ ನಿವಾಸಿಯಾಗಿರುವ ಶರಣಪ್ಪ (68) ಎಂಬ ವ್ಯಕ್ತಿಯೇ ಕೊಲೆಗೀಡಾದ ದುರ್ದೈವಿ ಎಂದು ಗುರುತಿಸಲಾಗುತ್ತಿದೆ. ರಾತ್ರಿ ಮನೆಯಲ್ಲಿ ಮಲಗಿರುವಾಗ ದುಷ್ಕರ್ಮಿಗಳು ಏಕಾಏಕಿ ಮನೆಯೊಳಗೆ ನುಗ್ಗಿ ಹೊರಗಡೆ ಎಳೆದು ತಂದು ಮನಬಂದಂತೆ ಥಳಿಸಿ ಹತ್ಯೆಗೈದಿದ್ದಾರೆ ಎನ್ನಲಾಗುತ್ತಿದೆ.

Contact Your\'s Advertisement; 9902492681

ಬಿಡಿಸಲು ಬಂದ ಪತ್ನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ ಈ ಘಟನೆಯ ಕುರಿತು ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here