ಕೋಟಿ ಅನುದಾನದಲ್ಲಿ ಸಿಸಿ ರಸ್ತೆ-ಚರಂಡಿ ಅಭಿವೃದ್ಧಿ

0
49

ವಾಡಿ: ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ೮ರ ಅಂಬೇಡ್ಕರ್ ಕಾಲೋನಿ, ರಾಮ ಮಂದಿರ ಬಡಾವಣೆ ಹಾಗೂ ಚೌಡೇಶ್ವರ ಕಾಲೋನಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಪಿಡಬ್ಲುಡಿ ಇಲಾಖೆಯಿಂದ ೧.೫ ಕೋಟಿ ರೂ. ಬಿಡುಗಡೆಯಾಗಿದೆ ಎಂದು ಪುರಸಭೆ ಕಾಂಗ್ರೆಸ್ ಸದಸ್ಯೆ ಸುಗಂಧಾ ನಾಗೇಂದ್ರ ಜೈಗಂಗಾ ಹೇಳಿದರು.

Contact Your\'s Advertisement; 9902492681

ಮಂಗಳವಾರ ತಮ್ಮ ವಾರ್ಡ್‌ನಲ್ಲಿ ಭೂಮಿ ಪೂಜೆ ನೆರವೇರಿಸುವ ಮೂಲಕ ಸಿಸಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಡಾವಣೆಯಲ್ಲಿ ಹದಗೆಟ್ಟ ರಸ್ತೆಗಳು ಹಾಗೂ ಚರಂಡಿಗಳಿರುವುದನ್ನು ಗಮನಿಸಿ ಅನುದಾನ ಬಿಡುಗಡೆಗೆ ಕಳೆದ ಎರಡು ವರ್ಷಗಳಿಂದ ಪ್ರಯತ್ನ ಮುಂದು ವರೆದಿತ್ತು. ಪರಿಣಾಮ ವಾರ್ಡ್‌ನಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ೧.೫ ಕೋಟಿ ರೂ. ಅನುದಾನ ಮಂಜೂರಾಗಿದೆ. ಅಲ್ಲದೆ ಬಡಾವಣೆಯಲ್ಲಿ ಶಿಥಿಲಗೊಂಡಿದ್ದ ಕುಡಿಯುವ ನೀರಿನ ಹಳೆಯ ಓವರ್ ಟ್ಯಾಂಕ್ ತೆರವು ಮಾಡಲಾಗಿದ್ದು, ಪುನಹಃ ಹೊಸದಾಗಿ ನೂತನ ಶೈಲಿಯ ಟ್ಯಾಂಕ್ ನಿರ್ಮಿಸಲು ನಕ್ಷೆ ಸಿದ್ಧಗೊಂಡಿದೆ. ಮಕ್ಕಳಿಗಾಗಿ ಉದ್ಯಾನವನ ಅಭಿವೃದ್ಧಿಗೊಳಿಸಲಾಗುವುದು. ಅಲ್ಲದೆ ಶುದ್ಧ ಕುಡಿಯುವ ನೀರಿನ ಆರ್‌ಒ ಪ್ಲ್ಯಾಂಟ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಹಿರಿಯ ಮುಖಂಡ ಟೋಪಣ್ಣ ಕೋಮಟೆ, ಸಂತ ಅಂಬ್ರೂಸ್ ಕಾನ್ವೆಂಟ್ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ತೆಕಲಾ ಮೇರಿ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಸಾಲೋಮನ್ ರಾಜಣ್ಣ, ಕೋಲಿ ಸಮಾಜದ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ನಾಗೇಂದ್ರ ಜೈಗಂಗಾ, ದತ್ತು ಜಾಧವ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here