ಬಿಸಿ ಬಿಸಿ ಸುದ್ದಿ

ಕಕ್ಕೇರಾ ಎಸ್‌ಬಿಐ ವ್ಯವಸ್ಥಾಪಕರ ಅಮಾನತ್ತಿಗೆ ಒತ್ತಾಯಿಸಿ ಪ್ರತಿಭಟನೆ

ಸುರಪುರ: ತಾಲ್ಲೂಕಿನ ಕಕ್ಕೇರಾ ಗ್ರಾಮದಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ನಿಯಮದಂತೆ ಸಾಲ ವಿತರಿಸಿದೆ ಅಕ್ರಮ ನಡೆಸಿದ್ದಾರೆ.ಆದ್ದರಿಂದ ಈ ವ್ಯವಸ್ಥಾಪಕರನ್ನು ಕೂಡಲೆ ಅಮಾನತ್ತುಗೊಳಿಸುವಂತೆ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಆಕ್ರೋಶ ವ್ಯವಕ್ತಪಡಿಸಿದರು.

ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ಅರೆಬೆತ್ತಲೆ ರಸ್ತೆ ತಡೆ ನಡೆಸಿ ಮಾತನಾಡಿ,ಒಂದು ಎಕರೆ ಜಮೀನಿರುವವರಿಗೆ ಐವತ್ತು ಸಾವಿರ ರೂಪಾಯಿಗಳ ವರೆಗೆ ಸಾಲ ನೀಡಬಹುದು ಎಂದು ಸರಕಾರದ ನಿಯಮವಿದೆ ಆದರೆ ಕಕ್ಕೇರಾ ಎಸ್‌ಬಿಐ ಶಾಖೆ ವ್ಯವಸ್ಥಾಪಕರು ಮತ್ತು ಫೀಲ್ಡ್ ಆಫಿಸರ್ ಸೇರಿ ಒಂದು ಎಕರೆ ಹದಿನೈದು ಗುಂಟೆ ಜಮೀನಿರುವವರಿಗೆ ಆರು ಲಕ್ಷದ ವರೆಗೆ ಸಾಲ ನೀಡಿ ಸರಕಾರದ ನಿಯಮ ಉಲ್ಲಂಘಿಸಿದ್ದಾರೆ.ಇದೊಂದೆ ಘಟನೆಯಲ್ಲದೆ ಇಂತಹ ಅನೇಕ ಪ್ರಕರಣಗಳು ನಡೆದಿವೆ ಎಂದು ಆರೋಪಿಸಿದರು.

ಸರಕಾರದ ಹಣವನ್ನು ತಮ್ಮಿಷ್ಟದಂತೆ ನಿಯಮಗಳ ಮೀರಿ ಸಾಲ ವಿತರಿಸಿ ಇತರೆ ರೈತರಿಗೆ ಸಾಲ ದೊರೆಯದಂತೆ ಮಾಡುತ್ತಿದ್ದಾರೆ.ಆದ್ದರಿಂದ ಸರಕಾರ ಮತ್ತು ಸಿಸಿಬಿ ಅಧಿಕಾರಿಗಳು ಈ ಶಾಖೆಯಲ್ಲಿ ನಡೆದಿರುವ ಕಾನೂನು ಬಾಹಿರ ಸಾಲ ವಿತರಣೆ ಪ್ರಕರಣಗಳ ತನಿಖೆ ನಡೆಸಬೇಕು ಮತ್ತು ಇಂತಹ ಪ್ರಕರಣಕ್ಕೆ ಕಾರಣವಾಗಿರುವ ಶಾಖೆ ವ್ಯವಸ್ಥಾಪಕರನ್ನು ಮತ್ತು ಫೀಲ್ಡ್ ಆಫೀಸರನ್ನು ಅಮಾನತ್ತುಗೊಳಿಸಬೇಕು.ಇಲ್ಲವಾದಲ್ಲಿ ಶಾಖಾ ಕಚೇರಿ ಮುಂದೆ ಮತ್ತು ತಾಲ್ಲೂಕು ಕಚೇರಿ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಸರಕಾರಕ್ಕೆ ಎಚ್ಚರಿಸಿದರು.ನಂತರ ಕೇಂದ್ರ ಅಪರಾಧ ದಳದ ಆಯುಕ್ತರಿಗೆ ಬರೆದ ಮನವಿಯನ್ನು ತಹಸೀಲ್ ಸಿರಸ್ತೆದಾರ ನಾಸಿರ್ ಅಹ್ಮದ ಮೂಲಕ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಗೋಪಾಲ ಬಾಗಲಕೋಟೆ,ಮಾನಯ್ಯ ದೊರೆ,ಕೃಷ್ಣಾ ದಿವಾಕರ,ಕೇಶಣ್ಣ ದೊರೆ,ಬಸವರಾಜ ಕವಡಿಮಟ್ಟಿ,ದೇವಪ್ಪ ದೇವರಮನಿ,ದೇವರಾಜ ಮದಕರಿ,ದೇವಿಂದ್ರಪ್ಪ ತಿಪ್ಪನಟಿಗಿ,ತಿರುಪತಿ ದೊರೆ ಸೇರಿದಂತೆ ಅನೇಕರಿದ್ದರು.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

7 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

7 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420