ಕಲಬುರಗಿ; ಗ್ರಾಮ ಪಂಚಾಯತಿಯಿಂದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು 100 ದಿನಗಳಿಂದ 250 ದಿನಗಳಿಗೆ ಹೆಚ್ಚಿಸಬೇಕೆಂದು ಪಿಂಜಾರ್,ನದಾಫ್ ಸಂಘದ ಮಹಾಮಂಡಳಿಯ ರಾಜ್ಯಾಧ್ಯಕ್ಷ ಅಬ್ದುಲ್ ರಝಾಕ್ ನದಾಫ್ ಆಗ್ರಹಿಸಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಮಹಾಮಾರಿಯಿಂದಾಗಿ ಗ್ರಾಮೀಣ ಭಾಗದ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಕೃಷಿ ಕಾರ್ಮಿಕರು ಬೇರೆ ರಾಜ್ಯಗಳಿಂದ ವಲಸೆ ಹೋಗಿ ಬಂದಿದ್ದರಿಂದ ಸದ್ಯ ಅವರಿಗೆ ಕೆಲಸವಿಲ್ಲ, ಈ ಸಂದರ್ಭದಲ್ಲಿ ಗ್ರಾಮೀಣ ಮಟ್ಟದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ100 ದಿನಗಳವೆರೆಗೆ ಕೆಲಸ ನೀಡುತ್ತಿದ್ದು, ಕಾರ್ಮಿಕರಿಗೆ ಜನಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ ಹೀಗಾಗಿ ಸರ್ಕಾರ ಎಚ್ಚೆತ್ತು ಕೂಲಿ ದಿನಗಳನ್ನು ಹೆಚ್ಚಿಸಬೇಕೆಂದು ಹೇಳಿದರು.
ಲಾಕ್ ದೌನ್ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಸಾಕಷ್ಟು ಜನರು ಕಷ್ಟಪಟ್ಟು ಜೀವನ ಸಾಗಿಸುತ್ತಿದ್ದು, ಕೆಲಸ ವಿಲ್ಲದೆ ಪರದಾಡುತ್ತಿದ್ದಲ್ಲದೆ ಕೈಯಲ್ಲಿ ಹಣವಿರದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಮಾಸ್ಕ್, ಸ್ಯಾನಿಟೈಜರ್, ಇನ್ನಿತರ ಸೌಲಭ್ಯಗಳು ನೀಡಬೇಕಾಗಿದ್ದು, ಈ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ನಂತರ ಮುಖ್ಯಮಂತ್ರಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮೌಲಾಲಿ ನದಾಫ್, ಸದಸ್ಯರಾದ ಇಸ್ಮಾಯಿಲ್ ನದಾಫ್, ಸದ್ದಾಮ್ ಹುಸೈನ್, ವಾಹಿದ್ ಅಲಿ, ದಸ್ತಗೀರ್ ನದಾಫ್, ರಫೀಕ್ ಅರಳಗುಂಡಗಿ ಸದಸ್ಯರು ಹಾಜರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…