ಶಹಾಪುರ: ದೇಶದಲ್ಲಿ ಆಗಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಕರೋನಾ ಭೀತಿಯಿಂದ ಸ್ವಗ್ರಾಮಕ್ಕೆ ವಲಸೆ ಬಂದಿರುವ ಕಾರ್ಮಿಕರಿಗೆ ಉದ್ಯೋಗ ಖಾತ್ರಿಯಲ್ಲಿ ಕೆಲಸ ನೀಡುವುದಾಗಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ ಹೇಳಿದರು.
ತಾಲ್ಲೂಕಿನ ದೋರನಹಳ್ಳಿ ಗ್ರಾಮಕೆ ಆಗಮಿಸಿದ ವಲಸೆ ಕಾರ್ಮಿಕರ ಮನೆ ಮನೆಗೆ ಭೇಟಿ ನೀಡಿ ಅವರ ಸಂಪೂರ್ಣ ಮಾಹಿತಿ ಪಡೆದು ಸಮೀಕ್ಷೆ ಕಾರ್ಯ ಇಂದು ಪ್ರಾರಂಭಿಸಿದರು,ವಿವಿಧ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣ,ಗೋವಾ, ಆಂಧ್ರಪ್ರದೇಶ ದೂರದ ಅನ್ಯ ರಾಜ್ಯಗಳಿಂದ ಆಗಮಿಸಿದ ವಲಸೆ ಕಾರ್ಮಿಕರಿಗೆ ಉದ್ಯೋಗ ಖಾತ್ರಿಯಲ್ಲಿ ಕೆಲಸ ನೀಡಲಾಗುವುದು ಎಂದು ಭರವಸೆ ನೀಡಿದರು.
ಯಾರೂ ಮತ್ತೆ ಕೆಲಸಕ್ಕಾಗಿ ಬೇರೆ ಬೇರೆ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿ ಬಾರದು ಇಲ್ಲೇ ಇದ್ದು ಕೆಲಸ ಮಾಡಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪಾರದರ್ಶಕತೆಯಿಂದ ಉದ್ಯೋಗ ಖಾತ್ರಿಯ ಕಾಮಗಾರಿಗಳು ನಡೆದರೆ ವಲಸೆ ಹೋಗುವುದನ್ನು ತಡೆಗಟ್ಟಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜನಪ್ರತಿನಿಧಿಗಳು,ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು, ಕಂಪ್ಯೂಟರ್ ಆಪರೇಟರ್ಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…