ಮತ ಎಣಿಕೆ ಹಿನ್ನೆಲೆಯಲ್ಲಿ ಡಾ. ಉಮೇಶ್ ಜಾಧವ್ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು

0
96

ಕಲಬುರಗಿ: ಇಂದು ಕಲಬುರಗಿ ಲೋಕಸಭಾ ಕ್ಷೇತ್ರದ ಹಾಗೂ ಚಿಂಚೋಳಿ ವಿಧಾನ ಸಭೆ ಉಪ ಚುನಾವಣೆ ಮತಎಣಿಕೆ ಹಿನ್ನೆಲೆಯಲ್ಲಿ ಲೋಕಸ ಸಭೆ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಹಾಗೂ ಪುತ್ರ ಚಿಂಚೋಳಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಅವರು ಬಿಳಿಗ್ಗೆ ಕಲಬುರಗಿ ನಗರದ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ನಂತರ ಮಾಧ್ಯಮರೊಂದಿಗೆ ಮಾತನಾಡಿದ ಅವರು ಇವಿಎಂ ಬಗ್ಗೆ ವಿಪಕ್ಷಗಳ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಕುಣಿಯಕ್ಕೆ ಬರದಿದ್ದರೆ ನೆಲ ಡೊಂಕು ಅಂತಾರಲ್ಲ ಹಾಗೇ. ಸೋಲುವ ಭೀತಿಯಿಂದ ಈ ರೀತಿ ಆರೋಪ ಮಾಡುತ್ತಿದ್ದಾರೆ, ಜಿಲ್ಲೆಯ ಜನರು ಬದಲಾವಣೆ ಬಯಸುತ್ತಿದ್ದಾರೆ, ಕನಿಷ್ಟ ಐವತ್ತು ಸಾವಿರ ಮತಗಳಿಂದ ಗೆಲ್ಲುವ ವಿಶ್ವಾಸವಿದೆ ಎಂದರು.

Contact Your\'s Advertisement; 9902492681

ನಗರದ ಪ್ರತಿಸ್ಠಿತ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ.ಅವಿನಾಶ್ ಜಾಧವ್ ಹಾಗೂ ಸಹೋದರ ರಾಮಚಂದ್ರ ಜಾಧವ್ ಜೊತೆ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here