ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸಿ: ಶಾಸಕ ಗುತ್ತೇದಾರ

0
94

ಆಳಂದ: ಇಂದಿನಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ಎದುರಿಸಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.

Contact Your\'s Advertisement; 9902492681

ವಿದ್ಯಾರ್ಥಿ ಜೀವನದಲ್ಲಿ ಎಸ್‌ಎಸ್‌ಎಲ್‌ಸಿ ಹಂತ ಅತ್ಯಂತ ಮಹತ್ವಪೂರ್ಣವಾದುದು ವಿದ್ಯಾರ್ಥಿಗಳು ವರ್ಷಪೂರ್ತಿ ಶ್ರಮವಹಿಸಿ ಅಭ್ಯಾಸ ಮಾಡಿರುತ್ತಾರೆ ಆದರೆ ಈಗ ಬಹಳ ದಿನಗಳ ನಂತರ ಪರೀಕ್ಷೆ ಬರೆಯುತ್ತಿರುವುದರಿಂದ ಸಹಜವಾಗಿ ಗೊಂದಲಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ ಆದ್ದರಿಂದ ವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಸಲಹೆ ನೀಡಿದ್ದಾರೆ.

ಮಾಸ್ಕ್ ಧರಿಸಿಕೊಂಡು, ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ಎದುರಿಸಿ. ವಿದ್ಯಾರ್ಥಿಗಳ ಹಿತ ಕಾಪಾಡಲು ಸರ್ಕಾರ ಬದ್ದವಾಗಿದ್ದು ಪರೀಕ್ಷೆಗೆ ಬೇಕಾಗಿರುವ ಎಲ್ಲ ಸಿದ್ಧತೆಗಳನ್ನು ಸರ್ಕಾರ ಮಾಡಿಕೊಂಡಿದೆ. ಪರೀಕ್ಷೆ ಸೂಸುತ್ರವಾಗಿ ನಡೆಸಿಕೊಂಡು ಹೋಗಲು ಈಗಾಗಲೇ ಪೂರ್ವಭಾವಿ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here