ಶಹಾಬಾದ; ಕರೊನಾ ಸೊಂಕು ಹಿನ್ನೇಲೆಯಲ್ಲಿ ಕಳೆದ ಮೂರು ತಿಂಗಳನಿಂದ ರಾಜ್ಯ,ಜಿಲ್ಲೆ ಲಾಕ್ ಡೌನ ಮಾಡಿದ ಹಿನ್ನೇಳೇಯಲ್ಲಿ ವಿದ್ಯುತ್ ಬಿಲ್ಲು, ನೀರಿನ ಕರ ಕಟ್ಟುವದು ಅಸಾಧ್ಯವಾಗಿದ್ದು, ಅದನ್ನು ಮನ್ನಾ ಮಾಡಬೇಕಾಗಿ ರಾಷ್ಟ್ರೀಯ ಭಾವೈಕ್ಯತೆ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.
ಬೆಳಿಗ್ಗೆ ನೂರಾರು ಜನ ಸಣ್ಣ,ಪುಟ್ಟ ವ್ಯಾಪಾರಸ್ಥರು, ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ, ಮಿಲನ್ ಚೌಕದಿಂದ ಮೆರವಣಿಗೆ ಮೂಲಕ ಡಾ.ಅಂಬೇಡ್ಕರ ಪುತ್ಥಳಿ ಮುಂದೆ ಸಮಾವೇಶಗೊಂಡರು.
ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪಹಳ್ಳಿ, ಬಸವರಾಜ ಮಯೂರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ ಮರ್ಚಂಟ್ ಮಾತನಾಡಿ, ಲಾಕ್ಡೌನ ಹಿನ್ನೇಲೆಯಲ್ಲಿ ಅಂಗಡಿ,ಮುಂಗಟ್ಟುಗಳು, ಸಣ್ಣಪುಟ್ಟ ವ್ಯಾಪಾರಸ್ಥರು, ಗಣಿ ಕಾರ್ಮಿಕರು ಹೆಚ್ಚಿರುವ ನಗರದಲ್ಲಿ ಕೆಲಸವಿಲ್ಲದೆ ಆರ್ಥಿಕವಾಗಿ ತೀವ್ರವಾಗಿ ತತ್ತರಿಸಿದ್ದು, ಮೂರು ತಿಂಗಳ ವಿದ್ಯುತ್ ಬಿಲ್ಲು, ನೀರಿನ ಕರ ಕಟ್ಟುವದು ಅಸಾಧ್ಯವಾಗಿದ್ದರಿಂದ ಸರ್ಕಾರ ಕೂಡಲೇ ವಿದ್ಯುತ್ ಬಿಲ್ಲನ್ನು, ನೀರಿನ ಕರವನ್ನು ಮನ್ನಾ ಮಾಡಬೇಕೆಂದು ಜೆಸ್ಕಾಂ ಇಲಾಖೆ, ನಗರ ಸಭೆಗೆ ಆಗ್ರಹಿಸಿದರು.
ಈ ಕುರಿತು ಜಿಲ್ಲಾ ಜೆಸ್ಕಾಮ ವ್ಯವಸ್ಥಾಪಕ ನಿರ್ಧೇಶಕರಿಗೆ ಬರೆದ ಮನವಿಯನ್ನು ತಹಶೀಲ್ದಾರ ಸುರೇಶ ವರ್ಮಾ ಅವರಿಗೆ ಸಲ್ಲಿಸಿದರು. ನೀರಿನ ಕರ ಕುರಿತು ನಗರ ಸಭೆ ಪೌರಾಯುಕ್ತರಾದ ಕೆ.ಗುರುಲಿಂಗಪ್ಪ ಅವರಿಗೆ ಸಲ್ಲಿಸಿದರು.
ಮುಖಂಡರಾದ ಜಾಫರ ಪಟೇಲ್, ಜಹೀರ ಅಹ್ಮದ ಪಟವೇಗಾರ, ಕಾಶಿನಾಥ ಜೋಗಿ,ಮಹ್ಮದ ಮಸ್ತಾನ, ಅಬ್ದುಲ್ ರಶೀದ್ ಜಮಾದಾರ, ಅಕ್ಬರ್ ಚಿಟ್, ಅಬ್ಬಾಸ್ ಮೂಡಗಿ, ಇಸ್ಮಾಯಿಲ್ ಸಾಹೇಬ್, ಮಹಿಬೂಬ ಇತರರು ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…