ಶಹಾಬಾದ: ನಗರದ ಬಸವೇಶ್ವರ ನಗರ ಹಾಗೂ ಮಿಲತ್ ನಗರ ಪ್ರದೇಶಗಳಲ್ಲಿ ಎಡಿಬಿ ಯೋಜನೆಯಲ್ಲಿ ಪೈಪ್ಲೈನ್ ಕಾಮಗಾರಿ ಕೈಗೊಳ್ಳುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಅವರು ನಗರದ ಬಸವೇಶ್ವರ ನಗರದಲ್ಲಿ ಆಯೋಜಿಸಲಾದ ಶುದ್ಧ ಕುಡಿಯುವ ನೀರಿನ ಮುಖ್ಯ ಪೈಪ್ಲೈನ್ ಅಳವಡಿಕೆ ಕಾಮಗಾರಿಗೆ ಶಾಸಕ ಬಸವರಾಜ ಮತ್ತಿಮಡು ಚಾಲನೆ ನೀಡಿ ಮಾತನಾಡಿದರು.
ನಗರದ ವರ್ತುಲ ರಸ್ತೆಯ ಹೊಸ ಬಡಾವಣೆಯಲ್ಲಿ ಸುಮಾರು ೧೪ ಲಕ್ಷ ರೂ. ವೆಚ್ಚದಲ್ಲಿ ೫೦೦ ಮೀಟರ್ ಉದ್ದದ ಪೈಪ್ಲೈನ್ ಅಳವಡಿಕೆ ಮಾಡಲಾಗುತ್ತಿದೆ. ರಸ್ತೆಯ ಎರಡು ಬದಿಯ ಹೊಸ ಬಡಾವಣೆಗೆ ನೀರು ಸರಬರಾಜು ಮಾಡಲು ತಲಾ ೬೦೦ ಮೀಟರ ಪೈಪ್ಲೈನ್ ಅಳವಡಿಕೆಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಅತ್ಯಂತ ಕಡಿಮೆ ದರದಲ್ಲಿ ಟೆಂಡರ್ ಹಾಕಿದ್ದಾರೆ. ಆದರೆ ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡುವುದಿಲ್ಲ. ಗುಣಮಟ್ಟದ ಕಾಮಗಾರಿ ಮಾಡಲೇಬೇಕೆಂದು ಗುತ್ತಿಗೆದಾರರಿಗೆ ಸ್ಪಷ್ಟಪಡಿಸಿದರು.
ಪೌರಾಯುಕ್ತ ಕೆ.ಗುರುಲಿಂಗಪ್ಪ, ಎಡಿಬಿ ಕಿರಿಯ ಅಭಿಯಂತರು, ನಗರ ಸಭೆ ಎಇಇ ಸರ್ವೋತ್ತಮ, ರವಿ ರಾಠೋಡ, ಅಣವೀರ ಇಂಗಿನಶೆಟ್ಟಿ, ಚಂದ್ರಕಾಂತ ಗೊಬ್ಬುರಕರ್, ಕನಕಪ್ಪ ದಂಡಗುಲಕರ್, ನಾಗರಾಜ ಮೇಲಗಿರಿ, ನಿಂಗಣ್ಣ ಹುಳಗೋಳ, ಪಾರ್ವತಿ ಪವಾರ, ಬಸವರಾಜ ಬಿರಾದಾರ,ವಿಜಯಾನಂದ ಮಾಣಿಕ್,ಸದಾನಂದ ಕುಂಬಾರ, ಸಂಜಯ ಸೂಡಿ,ದತ್ತಾ ಫಂಡ್,ಸಿದ್ರಾಮ ಕುಸಾಳೆ ಇತರರು ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…