ಶೀಘ್ರದಲ್ಲೇ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಕಾಯ್ದೆಯ ಸುಗ್ರೀವಾಜ್ಞೇ: ಚಿವ ಜಗದೀಶ ಶೆಟ್ಟರ್

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವಾರು ನಗರಗಳು ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ಟೌನ್‌ಶಿಪ್‌ಗಳ ನಿರ್ಮಾಣ ಆಗಬೇಕೆನ್ನುವ ಬಹುದಿನಗಳ ಬೇಡಿಕೆಯಿದೆ. ಇದುವರೆಗೂ ಕೇವಲ ಚರ್ಚೆಯಲ್ಲೇ ಇದ್ದ ಈ ವಿಷಯದ ಬಗ್ಗೆ ನಗರಾಭಿವೃದ್ದಿ ಸಚಿವರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಮನವರಿಕೆಯನ್ನು ಮಾಡಿಕೊಟ್ಟಿದ್ದೇವೆ. ಅಲ್ಲದೆ, ರಾಜ್ಯದಲ್ಲಿ ಆಗಬೇಕಾದ ಕೈಗಾರಿಕಾ ಟೌನ್‌ ಶಿಪ್‌ಗಳ ಬಗ್ಗೆ ವರದಿಯನ್ನು ತಯಾರಿಸುವಂತೆ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ. ಈ ಪ್ರಸ್ತಾಪಕ್ಕೆ ನಗರಾಭಿವೃದ್ದಿ ಇಲಾಖೆಯ ಒಪ್ಪಿಗೆ ಪಡೆದುಕೊಂಡು ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಬೆಂಗಳೂರು ನಗರದ ಕಾಸಿಯಾ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಎಮ್‌ಎಸ್‌ಎಂಇ ದಿನಾಚರಣೆಯ ಅಂಗವಾಗಿ ಕೋವಿಡ್‌ – 19 ಉದ್ಯೋಗ ಸಹಾಯವಾಣಿಗೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದ ಹಾಗೂ ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಕರೋನಾ ಸಂಕಷ್ಟದಿಂದ ನಮ್ಮ ಆರ್ಥಿಕ ವ್ಯವಸ್ಥೆಗೆ ಚೇತರಿಕೆ ನೀಡುವ ಚೈತನ್ಯ ಈ ಸಂಸ್ಥೆಗಳಿಗೆ ಇದೆ. ಈ ಕ್ಷೇತ್ರಕ್ಕೆ ಕೇಂದ್ರ ಸರಕಾರದಿಂದಲೂ ಬಹಳಷ್ಟು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯವನ್ನು ನಂ ೧ ಕೈಗಾರಿಕಾ ಸ್ನೇಹೀ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರ ನೇತೃತ್ವದಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ರಾಜ್ಯವನ್ನು ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸಲು ಅಗತ್ಯವಿದ್ದ ಭೂಸುಧಾರಣೆ ಹಾಗೂ ಕೈಗಾರಿಕೆಗಳ ಸ್ಥಾಪನೆಗೆ ಅಡ್ಡಿಯಾಗಿದ್ದ ಹಲವಾರು ನಿಯಮಗಳನ್ನು ಸರಳೀಕರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದರು.

ಕಳೆದ ಸಚಿವ ಸಂಪುಟದಲ್ಲಿ ಈಗಾಗಲೇ 2002 ಕರ್ನಾಟಕ ಕೈಗಾರಿಕಾ ಸೌಲಭ್ಯ ಅಧಿನಿಯಮಕ್ಕೆ ತಿದ್ದುಪಡಿಯನ್ನು ತರಲು ಒಪ್ಪಿಗೆಯನ್ನು ಪಡೆಯಲಾಗಿದೆ. ಕೇವಲ ಕೈಗಾರಿಕಾ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿಯ ಆಧಾರದ ಮೇಲೆ ಕೈಗಾರಿಕೆಗಳ ಸ್ಥಾಪನೆಯ ಕಾರ್ಯವನ್ನು ಪ್ರಾರಂಭಿಸಲು ಈ ಅಧಿನಿಯಮ ಅವಕಾಶ ಒದಗಿಸಲಿದೆ. ಮೂರು ವರ್ಷಗಳು ಅಥವಾ ವಾಣಿಜ್ಯ ಉತ್ಪಾದನೆ ಪ್ರಾರಂಭವಾಗುವ ಮುನ್ನ ಬೇರೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಪಡೆಯಲು ಅವಕಾಶ ಇದರಲ್ಲಿ ದೊರೆಯಲಿದೆ. ಈ ತಿದ್ದುಪಡಿಯನ್ನು ಶೀಘ್ರದಲ್ಲೇ ಸುಗ್ರೀವಾಜ್ಞೇಯ ಮೂಲಕ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಕೈಗಾರಿಕಾ ಟೌನ್‌ಶಿಪ್‌ ಗಳನ್ನು ನಿರ್ಮಾಣ ಮಾಡಬೇಕು ಎನ್ನುವುದು ಹಲವಾರು ವರ್ಷಗಳ ಬೇಡಿಕೆಯಾಗಿದೆ. ಅವಕಾಶವನ್ನು ನೀಡಿದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಾಡೆಲ್‌ ನ ಟೌನ್‌ ಶಿಪ್‌ ಗಳೂ ಬರಲಿವೆ ಎಂದು ನಗರಾಭಿವೃದ್ದಿ ಸಚಿವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ಹಿನ್ನಲೆಯಲಿ ಬೆಂಗಳೂರು ನಗರ ಹಾಗೂ ರಾಜ್ಯದ ಇತರೆ ಯಾವ ಭಾಗಗಳಲ್ಲಿ ಟೌನ್‌ ಶಿಪ್‌ ಗಳ ನಿರ್ಮಾಣ ಮಾಡಬೇಕು. ಹಾಗೂ, ಅದರ ಭೌಗೋಳಿಕ ಮ್ಯಾಪ್‌ ನ್ನ ಹೊಂದಿರುವಂತಹ ಒಂದು ಕಾಂಪ್ಯಾಕ್ಟ್‌ ಪ್ರಸ್ತಾವನೆಯನ್ನು ಸಿದ್ದಪಡಿಸುವಂತೆ ಸೂಚನೆ ನೀಡಿದ್ದೇನೆ. ಈ ಪ್ರಸ್ತಾವನೆಗೆ ನಗರಾಭಿವೃದ್ದಿ ಇಲಾಖೆಯ ಒಪ್ಪಿಗೆಯನ್ನು ಪಡೆದುಕೊಂಡು ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ತರಲಾಗುವುದು ಎಂದು ಸಚಿವರ ಭರವಸೆ ನೀಡಿದರು.

ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ಅಡಿಯಲ್ಲಿ ಹಂಚಿಕೆ ಮಾಡಲಾಗುವ ಭೂಮಿಯ ದರದ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸಲು ಹೊಸ ವೈಜ್ಞಾನಿಕ ನೀತಿಯನ್ನು ತರುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಅಲ್ಲದೆ, ನೂತನ ಕೈಗಾರಿಕಾ ನೀತಿ ಸಿದ್ದವಾಗಿದ್ದು, ಆರ್ಥಿಕ ಇಲಾಖೆಯ ಅನುಮತಿಗೆ ಕಾಯತ್ತಿದ್ದೇವೆ. ಈ ಕಾಯ್ದೆಯಲ್ಲಿ ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಸಿಯಾ ಅಧ್ಯಕ್ಷ ಆರ್‌ ರಾಜು, ಉಪಾಧ್ಯಕ್ಷರಾದ ಕೆ.ಬಿ. ಅರಸಪ್ಪ ಸೇರಿದಂತೆ ರಾಜ್ಯದ ಹಲವು ಭಾಗಗಳಿಂದ ಆಗಮಿಸಿದ್ದ ಸಂಘದ ಸದಸ್ಯರು ಭಾಗವಹಿಸಿದ್ದರು. ಇದೇ ವೇಳೆ, ಕರ್ನಾಟಕ ಕೌಶಲ್ಯ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಕೆ. ರತ್ನಪ್ರಭಾ ಅವರು ವೆಬ್‌ನೀಯರ್‌ ಮೂಲಕ ಪಾಲ್ಗೊಂಡಿದ್ದರು

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

9 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

9 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

9 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

9 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

10 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420