ಸುರಪುರ: ಕಳೆದ ೨೪ನೇ ತಾರೀಖಿನಂದು ಯಾದಗಿರಿಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿರುವ ಜಿಲ್ಲಾ ಪಂಚಾಯತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳವರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಕೂಡಲೆ ಬಂಧಿಸುವಂತೆ ರತ್ನಮ್ಮ ದೇವಿ ಮಹಿಳಾ ವಾಲ್ಮೀಕಿ ಪರಿಶಿಷ್ಟ ಪಂಗಡ ಸ್ವ ಸಹಾಯ ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮೀ ಭೀಮಣ್ಣ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳೆಕೆ ನೀಡಿರುವ ಅವರು,ಒಬ್ಬ ಮುಖಂಡನ ಮೇಲೆ ಹಲ್ಲೆ ನಡೆದು ಮೂರು ದಿನಗಳಾದರು ಇನ್ನೂ ಆರೋಪಿಗಳನ್ನು ಬಂಧಿಸದೆ ನಿರ್ಲಕ್ಷ್ಯ ತೋರುವುದು ಸರಿಯಲ್ಲ.ಮರಿಲಿಂಗಪ್ಪ ಕರ್ನಾಳ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸುವ ಜೊತೆಗೆ ಶೀಘ್ರವೆ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.