ಸುರಪುರ: ನಗರದ ತಹಸೀಲ್ದಾರ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು.ರಾಜ್ಯದಲ್ಲಿ ಲಾಕ್ಡೌನ್ ಇರುವುದರಿಂದ ಕೋವಿಡ್-೧೯ ನಿಯಮಗಳಿಗೆ ಧಕ್ಕೆಯಾಗದಂತೆ ಸರಳವಾಗಿ ಆಚರಣೆ ಮಾಡಲಾಯಿತು.ಬೆಳಿಗ್ಗೆ ೯ ಗಂಟೆಗೆ ತಹಸೀಲ್ದಾರ್ ಕಚೇರಿಯಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ವಂದಿಸಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ನಿಂಗಣ್ಣ ಬಿರಾದಾರ್,ಸಿರಸ್ತೆದಾರ ಕೊಂಡಲ ನಾಯಕ್,ಸೋಮಶೇಖರ ಪತ್ತಾರ ಮುಖಂಡರಾದ ಸಿದ್ದಣ್ಣಗೌಡ ಹೆಬ್ಬಾಳ ಇತರರಿದ್ದರು.