ಬಿಸಿ ಬಿಸಿ ಸುದ್ದಿ

ಗೀತಾ ನಾಗಭೂಷಣ್ ಸಾಹಿತ್ಯ ಸೇವೆ ಅಪಾರವಾದದ್ದು: ಸಿದ್ದಲಿಂಗಣ್ಣ ಆನೆಗುಂದಿ.

ಶಹಾಪುರ : ನಾಡಿನ ಪ್ರಖ್ಯಾತ ಲೇಖಕಿ,ಕಾದಂಬರಿಗಾರ್ತಿ ನಾಡೋಜ ಗೀತಾ ನಾಗಭೂಷಣ ಅವರ ಸಾಹಿತ್ಯ ಸೇವೆ ಅಪಾರವಾದದ್ದು ಅವರ ಅಕಾಲಿಕ ನಿಧನದಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಣ್ಣ ಆನೆಗುಂದಿ ಸಂತಾಪ ಸೂಚಿಸಿ ಹೇಳಿದರು.

ಗೀತಾ ನಾಗಭೂಷಣ್ ಅವರು ಹಲವಾರು ಸಾಹಿತ್ಯದ ಕೃತಿಗಳು ರಚಿಸುವ ಮೂಲಕ ತಳ ಸಮುದಾಯದ ಮಹಿಳೆಯರ ಮೇಲಾಗುವ ಶೋಷಣೆಗಳ ಬಗ್ಗೆ ಸಾಕಷ್ಟು ಹೋರಾಟ ಮಾಡಿ ತಮ್ಮ ಬಂಡಾಯ ಸಾಹಿತ್ಯದ ಬರವಣಿಗೆಯ ಮೂಲಕ ಸಾಕಷ್ಟು ಬಿಸಿ ಮುಟ್ಟಿ ಮುಟ್ಟಿಸಿದವರು.

ಅವರ ಸಾಹಿತ್ಯ ಸೇವೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ,ಅವರು ರಚಿಸಿರುವ ಕಾದಂಬರಿಗಳು ಚಲನಚಿತ್ರಗಳಾಗಿವೆ ಇವರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ,ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ, ಕಾರ್ಯ ನಿರ್ವಹಿಸಿದ್ದಾರೆ ಬದುಕು ಎಂಬ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಕೂಡ ಲಭಿಸಿದೆ.

ಸಾಹಿತಿಗಳಾದ ಶಿವಣ್ಣ ಇಜೇರಿ, ಕಥೆಗಾರರಾದ ಸಿದ್ದರಾಮ ಹೊನಕಲ್,ಪ್ರಗತಿಪರ ಚಿಂತಕ ವಿಶ್ವರಾಧ್ಯ ಸತ್ಯಂಪೇಟೆ, ಜಾನಪದ ಸಾಹಿತಿ ಹಾಗೂ ಕನ್ನಡ ಪಂಡಿತರಾದ ಡಾ. ಅಬ್ದುಲ್ ಕರೀ ಕನ್ಯಾಕೊಳ್ಳೂರ, ಶರಣ ಸಾಹಿತಿ ದೊಡ್ಡಬಸಪ್ಪ ಬಳೂರಗಿ,ಲಿಂಗಣ್ಣ ಪಡಶೆಟ್ಟಿ ಸಂಶೋಧಕರಾದ ಡಾ.ಮೊನಪ್ಪ ಶಿರವಾಳ, ಗುರುಬಸಯ್ಯ ಗದ್ದುಗೆ,ಗುಂಡಪ್ಪ ತುಂಬಿಗಿ,ಗೌರವ ಕಾರ್ಯದರ್ಶಿಗಳಾದ ಬಸವರಾಜ ಸಿನ್ನೂರ, ಪಂಚಾಕ್ಷರಯ್ಯ ಹಿರೇಮಠ ಹಾಗೂ ಇತರರು ಸಂತಾಪ ಸೂಚಿಸಿದ್ದಾರೆ.

emedialine

Recent Posts

ಡಾ.ಶರಣಬಸಪ್ಪ ಕ್ಯಾತನಾಳಗೆ ಮುಖ್ಯಮಂತ್ರಿಗಳಿಂದ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿ ಪ್ರದಾನ

ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…

51 mins ago

ಮುಸ್ಲಿಮರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ: ಅಬ್ದುಲ್ ರಹೀಮಾನ್ ಪಟೇಲ್

ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…

1 hour ago

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

3 hours ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

3 hours ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

3 hours ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

4 hours ago