ಬೈಕ್ ವಿಚಾರದಲ್ಲಿ ಗಲಾಟೆ: ನಡು ರಸ್ತೆಯಲ್ಲಿ ಯುವಕನನ್ನು ಕೊಚ್ಚಿ ಕೊಲೆಗೆ ಯತ್ನ

0
208

ಕಲಬುರಗಿ: ಜಿಲ್ಲೆಯ ಓಲ್ಡ್ ಜೇವರ್ಗಿ ರಸ್ತೆಯ ಹತ್ತಿರ ನಡು ರಸ್ತೆಯಲ್ಲಿ ಕೆಲವು ರೌಡಿಗಳು ವಿದ್ಯಾರ್ಥಿ ಓರ್ವನು ಅಟ್ಟಾಡಿಸಿ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.

ರಾಮನಗರ ನಿವಾಸಿ ಸಾಗರ (20) ಹಲ್ಲೆಗೆ ಒಳಗಾದ ಯುವಕ. ಸಾಗರ ಡಿಪ್ಲೊಮಾ ವಿದ್ಯಾರ್ಥಿ ಎಂದು ತಿಳಿದುಬಂದಿದ್ದು, ಬೈಕ್ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣದಿಂದ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಗಲಾಟೆ ಸಂಭವಿಸಿದೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ರೌಡಿ ಫಹೀಮ ಮಿರ್ಜಾ ಮತ್ತು ಆತನ ಸಹಚರರು ಸೇರಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ನಡು ರಸ್ತೆಯಲ್ಲಿ ರಕ್ತದಲ್ಲಿ ಬಿದ್ದ ಸಾಗರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಸ್ಟೇಷನ್ ಬಜಾರ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here