ಶಹಾಪುರ : ಪ್ರತಿಯೊಬ್ಬರ ಮನೆಯ ಮುಂದೆ ಮರ ಬೆಳೆಸಿ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ನಾವು ನೀವೆಲ್ಲರೂ ಸೇರಿಕೊಂಡು ಜವಾಬ್ದಾರಿಯಿಂದ ಕೆಲಸ ಮಾಡಬೇಕಾಗಿದೆ ಎಂದು ಎಸ್ಡಿಎಂಸಿ ಅಧ್ಯಕ್ಷರಾದ ಗುರು ಹೊಸೂರು ಹೇಳಿದರು.
ತಾಲ್ಲೂಕಿನ ಹೊಸೂರು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಟ್ಟು ಮಾತನಾಡಿದರು,ಪ್ರಸ್ತುತ ದಿನಮಾನಗಳಲ್ಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರ ನಾಶ ಮಾಡುತ್ತಿರುವುದರಿಂದ ನಿಸರ್ಗ ಸಂಪತ್ತು ಹಾಳಾಗುತ್ತಿದೆ ಆದ್ದರಿಂದ ಪರಿಸರ ಸಂರಕ್ಷಣೆ ಮಾಡುವ ಹೊಣೆ ನಮ್ಮ ನಿಮ್ಮೆಲ್ಲರ ಕೈಯಲ್ಲಿದೆ ಎಂದು ಹೇಳಿದರು.
ಗಿಡಮರಗಳು ನೆಟ್ಟರೆ ಸಾಲದು ಅವುಗಳ ಪೊಷಣೆ ಮಾಡುವುದರ ಜೊತೆಗೆ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಶಿಕ್ಷಕರ ಕೈಯಲ್ಲಿದೆ ಎಂದು ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಕಾಶಿನಾಥ ಶಿಕ್ಷಕರಾದ ಪರಶುರಾಮ ಬಸವರಾಜ ಸಾಸನೂರ ನಾಗರಾಜ ಚಿಂತಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.