ಈಶಾನ್ಯ ಶಿಕ್ಷಕರ ಮತಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ: ಎನ್.ಎಸ್. ಹಿರೇಮಠ

1
105

ಕಲಬುರಗಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಲಾಗಿದೆ ಎಂದು ಜ್ಞಾನಜ್ಯೋತಿ ಕರಿಯರ್ ಅಕಾಡೆಮಿಯ ನಿರ್ದೇಶಕರಾದ ಎನ್.ಎಸ್. ಹಿರೇಮಠ ತಿಳಿಸಿದ್ದಾರೆ.

Contact Your\'s Advertisement; 9902492681

ಕಳೆದ ಒಂದೂವರೆ ದಶಕದಿಂದ ಶೈಕ್ಷಣಿಕ ರಂಗ ಮತ್ತು ಶಿಕ್ಷಕರಿಗೆ ಸಂಬಂದಿಸಿದ ವಿಷಯದಲ್ಲಿ ಕಾರ್ಯ ನಿರ್ವಹಿಸುತ್ತಾ ಹೊರಟಿರುವುದರಿಂದ ಶಿಕ್ಷಕರ ಸಮಸ್ಯೆ, ಸವಾಲುಗಳ ಬಗ್ಗೆ ಮತ್ತು ಶೈಕ್ಷಣಿಕ ರಂಗ ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಸಂಪೂರ್ಣವಾದ ಮಾಹಿತಿ ಇದ್ದು ಹೀಗಾಗಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಶಿಕ್ಷಕರ ಧ್ವನಿಯಾಗುವ ಸದಾಶಯ ಹೊಂದಿದ್ದು ಈ ದಿಶೆಯಲ್ಲಿ ಈಗಾಗಲೇ ಈಶಾನ್ಯ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಶಿಕ್ಷಣ ತಜ್ಞರ ಜೊತೆ, ಉಪನ್ಯಾಸಕರ ಜೊತೆ, ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಮತ್ತು ಸಮಾನ ಮನಸ್ಕರರ ಜೊತೆ ಕಳೆದ ಎರಡು ತಿಂಗಳುಗಳಿಂದ ನಿರಂತರವಾಗಿ ಸಂಪರ್ಕದಲ್ಲಿದ್ದು ಎಲ್ಲೆಡೆಯಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here