ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

0
25

ಕಲಬುರಗಿ: ಪ್ರಸಕ್ತ 2020-21 ನೇ ಸಾಲಿಗೆ ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಈ ಬಾಲಕ, ಬಾಲಕಿಯರು 2019 ರ ಆಗಸ್ಟ್ ರಿಂದ 2020 ರ ಜುಲೈ ಅವಧಿಯಲ್ಲಿ ಧೈರ್ಯ ಸಾಹಸ ಪ್ರದರ್ಶಿಸಿಸಿರಬೇಕು2002 ರ ಆಗಸ್ಟ್ 1 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುತ್ತದೆ.

Contact Your\'s Advertisement; 9902492681

ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಲಗತ್ತಿಸಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಎದುರುಗಡೆ (ಸರ್ಕಾರಿ ಅಂಧ ಬಾಲಕರ ಪ್ರೌಢಶಾಲೆ ಮೇಲ್ಗಡೆ) ಕಲಬುರಗಿ ಕಚೇರಿಯಲ್ಲಿ 2020 ಆಗಸ್ಟ್ 20 ರ ಸಂಜೆ5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-278659 ಗೆ ಸಂಪರ್ಕಿಸಲು ಕೋರಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here