ಬಿಸಿ ಬಿಸಿ ಸುದ್ದಿ

ರೈತ ವಿರೋಧಿ ಕಾಯ್ದೆಗಳ ಕೈ ಬಿಡಲು ರೈತ ಕಾರ್ಮಿಕರ ಪ್ರತಿಭಟನೆ

ಸುರಪುರ: ತಾಲೂಕಿನ ಪೇಠ ಅಮ್ಮಾಪುರ ಮತ್ತು ಬೈಚಬಾಳ ಗ್ರಾಮ ಪಂಚಾಯತಿಗಳ ಮುಂದೆ ಅಖೀಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಶರಣು ಅನಕಸೂಗುರು ಮಾತನಾಡಿ,ಸರಕಾರ ಇಂದು ಭೂ ಸುಧಾರಣೆ ಕಾಯ್ದೆ ಹೆಸರಿನಲ್ಲಿ ಕಾನೂನು ಜಾರಿಗೆ ತರಲು ಮುಂದಾಗಿ ದೇಶದ ರೈತರನ್ನು ಸಮಾಧಿ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಭೂ ಸುಧಾರಣೆ ಕಾಯ್ದೆಯಿಂದ ಸಣ್ಣ ರೈತರು ತಮ್ಮ ಜಮೀನು ಕಳೆದುಕೊಳ್ಳುವ ಹಂತಕ್ಕೆ ಬರಲಿದ್ದಾರೆ.ಇಲ್ಲಿಯವರೆಗೆ ರೈತನಾದವನು ಭೂಮಿ ಖರೀದಿಸುವಂತಿತ್ತು,ಆದರೆ ಈಗ ತರುತ್ತಿರುವ ಕಾನೂನಿನಿಂದ ಯಾರಬೇಕಾದರು ಭೂಮಿ ಖರೀದಿಸಬಹುದಾಗಿದೆ.ಇದರಿಂದ ಭೂಮಿ ಎಲ್ಲವು ಉಳ್ಳವರ ಪಾಲಾಗಲಿದೆ ಎಂದು ಬೇಸರ ತೋಡಿಕೊಂಡರು.

ಅಲ್ಲದೆ ಎಪಿಎಂಸಿ ಕಾಯ್ದೆಯು ರೈತ ವಿರೋಧಿ ಕಾಯ್ದೆಯಾಗಿದೆ.ಜೊತೆಗೆ ಉದ್ಯೋಗ ಖಾತ್ರಿ ಯೊಜನೆ ಹಳ್ಳ ಹಿಡಿದಿದ್ದು ಕಾರ್ಮಿಕರಿಗೆ ಕೆಲಸ ಸಿಗದೆ ವಂಚಿಸಲಾಗುತ್ತಿದೆ.ಕೂಡಲೆ ಸರಕಾರ ಸಮರ್ಪಕವಾಗಿ ಉದ್ಯೋಗ ಖಾತ್ರಿ ಜಾರಿಗೊಳಿಸಬೇಕು ಮತ್ತು ವರ್ಷಕ್ಕೆ ೨೦೦ ದಿನ ಕೆಲಸ ನೀಡಬೇಕು ಮತ್ತು ದಿನಕ್ಕೆ ೬೦೦ ರೂಪಾಯಿಗಳ ಕೂಲಿ ನೀಡಬೇಕೆಂದು ಒತ್ತಾಯಿಸಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಪಂಚಾಯತ್ ಅಧಿಕಾರಿಗಳ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ರಾಜು ಬೋನ್ಹಾಳ ಮುತ್ತಮ್ಮ ಬಸವರಾಜ ನಾಗರಾಜ ರಮಜಾನ್ ಸಾಬ್ ಮತ್ತಿತರರಿದ್ದರು.

emedialine

Recent Posts

ನ್ಯಾಯಮೂರ್ತಿ ಡಾ. ಶಿವರಾಜ ವಿ. ಪಾಟೀಲರ ನುಡಿಮುತ್ತುಗಳು ಜೀವನದಲ್ಲಿ ಅಳವಡಿಸಿಕೊಳ್ಳಿ

ಕಲಬುರಗಿ: ನಗರದ ಜಸ್ಟಿಸ್ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಮತ್ತು ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಕಲಬುರಗಿಯಲ್ಲಿ ಶ್ರಾವಣ…

7 hours ago

ಛಾಯಾಚಿತ್ರ ಪ್ರದರ್ಶನ ಭಾಷೆಯಷ್ಟೇ ಪ್ರಬಲ ಮಾಧ್ಯಮ

ಕಲಬುರಗಿ : ಒಂದು ಛಾಯಾಚಿತ್ರ ನೂರು ಪದಗಳಲ್ಲಿ ಹೇಳಬಹುದಾದೊಂದನ್ನು ಪರಿಣಾಮಕಾರಿ ಹೇಳುತ್ತದೆ, ಅದು ಭಾಷೆಯಷ್ಟೇ ಪ್ರಬಲ ಮಾಧ್ಯಮ ಎಂದು ಹಿರಿಯ…

7 hours ago

ಕಲಬುರಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು 29 ರಂದು: ಸರ್ವಾಧ್ಯಕ್ಷೆ ಲೇಖಕಿ ಪ್ರಮೀಳಾ ಜಾನಪ್ಪಗೌಡಗೆ ಸನ್ಮಾನ

ಕಲಬುರಗಿ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಆಗಷ್ಟ್ 29 ರಂದು ಹಮ್ಮಿಕೊಂಡಿರುವ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ…

7 hours ago

18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಡಿ.ಸಿ.ಮನವಿ

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.01-01-2025 ಅರ್ಹತಾ ದಿನವನ್ನಾಗಿ ಪರಿಗಣಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವು ಇದೇ…

8 hours ago

ನಾಳೆ ಕಲಬುರಗಿಗೆ ಉಪ ಮುಖ್ಯಮಂತ್ರಿ ಆಗಮನ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಕಲಬುರಗಿ: ರಾಜ್ಯದ "ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ.…

8 hours ago

ಪ್ರಜ್ವಲ್‍ಗೆ ಸನ್ಮಾನ

ಕಲಬುರಗಿ: ಕಲ್ಯಾಣ ಕರ್ನಾಟಕದ ಮಹಾನಗರದಲ್ಲಿ ಬುದ್ಧ ಬಸವ ಅಂಬೇಡ್ಕರ್ ಕಂಪ್ಯೂಟರ್ ಬೆರಳಚ್ಚುಗಾರರ ಹಾಗೂ ಜೆರಾಕ್ಸ್ ಹಾಗೂ ಸಣ್ಣಪುಟ್ಟ ವ್ಯಾಪಾರಿಗಳ ಸಂಘದ…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420